ಸಂಗ್ರಹ ಚಿತ್ರ 
ದೇಶ

ಕಾಶ್ಮೀರ ವಿಧಾನಸಭೆ ವಿಸರ್ಜಿಸಿ, ಚುನಾವಣೆ ನಡೆಸಿ: ಒಮರ್ ಅಬ್ದುಲ್ಲಾ ಆಗ್ರಹ

ಪಿಡಿಪಿ-ಬಿಜೆಪಿ ನಡುವಿನ ಮೈತ್ರಿ ಮುರಿದು ಬಿದ್ದಿದ್ದು, ಕಾಶ್ಮೀರ ವಿಧಾನಸಭೆಯನ್ನು ಕೂಡಲೇ ವಿಸರ್ಜಿಸಿ ಚುನಾವಣೆ ನಡೆಸಬೇಕು ಎಂದು ನ್ಯಾಷನಲ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಶ್ರೀನಗರ: ಪಿಡಿಪಿ-ಬಿಜೆಪಿ ನಡುವಿನ ಮೈತ್ರಿ ಮುರಿದು ಬಿದ್ದಿದ್ದು, ಕಾಶ್ಮೀರ ವಿಧಾನಸಭೆಯನ್ನು ಕೂಡಲೇ ವಿಸರ್ಜಿಸಿ ಚುನಾವಣೆ ನಡೆಸಬೇಕು ಎಂದು ನ್ಯಾಷನಲ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಒಮರ್ ಅಬ್ದುಲ್ಲಾ, ತಾವು ಯಾವುದೇ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ. ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ಕೇಂದ್ರ ಸರ್ಕಾರ ಶಾಸಕರ ಕುದುರೆ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಕೂಡಲೇ ಕಾಶ್ಮೀರ ವಿಧಾನಸಭೆಯನ್ನು ವಿಸರ್ಜನೆ ಮಾಡಿ, ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಒಮರ್ ಅಬ್ದುಲ್ಲಾ, ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡರು ಶಾಸಕರ ಕುದುರೆ ವ್ಯಾಪರಾದ ಕುರಿತು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರನ್ನು ನಂಬಲು ಸಾಧ್ಯವಿಲ್ಲ. ಶಾಸಕರ ಕುದುರೆ ವ್ಯಾಪಾರಕ್ಕೂ ಮೊದಲೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇತ್ತೀಚೆಗಷ್ಟೇ ಕಾಶ್ಮೀರ ಉಪ ಮುಖ್ಯಮಂತ್ರಿ ಕವಿಂದರ್ ಗುಪ್ತಾ ಮಾಧ್ಯಮಗಳಿಗೆ ಹೇಳಿಕೆ ನೀಡಿ, ತಮ್ಮ ಪಕ್ಷ ಹೊಸ ಚಿಂತನೆಯಲ್ಲಿ ತೊಡಗಿದೆ ಎಂದು ಹೇಳುವ ಮೂಲಕ ಶಾಸಕರ ಕುದುರೆ ವ್ಯಾಪಾರದ ಕುರಿತು ಶಂಕೆ ಮೂಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal flood: ಮೃತರ ಸಂಖ್ಯೆ 270ಕ್ಕೆ ಏರಿಕೆ, ಸುಮಾರು 288 ಭಾರತೀಯರು ನಾಪತ್ತೆ! 800ಕ್ಕೂ ಹೆಚ್ಚು ಜನರ ರಕ್ಷಣೆ