ಬಾಬಾ ರಾಮ್ ದೇವ್ 
ದೇಶ

ಕಾನೂನು ಬಾಹಿರ ಚಟುವಟಿಕೆ ನಡೆಸುವ ದೇವಮಾನವ, ಬಾಬಾಗಳನ್ನು ನೇಣಿಗೆ ಹಾಕಿ: ರಾಮ್ ದೇವ್

ಅಕ್ರಮ ಚಟುವಟಿಕೆಗಳಲ್ಲಿ ಭಾಗಿಗಳಾಗಿರುವ ಸ್ವಯಂ ಘೋಷಿತ ದೇವಮಾನವರು, ಬಾಬಾಗಳನ್ನು ಗಲ್ಲಿಗೇರಿಸಬೇಕು ಎಂದು ಯೋಗ ಗುರು, ಪತಂಜಲಿ ಸಂಸ್ಥೆಗಳ ಸೂತ್ರಧಾರ ಬಾಬಾ ರಾಮ್ ದೇವ್....

ಕೋಟಾ(ರಾಜಸ್ಥಾನ): ಅಕ್ರಮ ಚಟುವಟಿಕೆಗಳಲ್ಲಿ ಭಾಗಿಗಳಾಗಿರುವ ಸ್ವಯಂ ಘೋಷಿತ ದೇವಮಾನವರು, ಬಾಬಾಗಳನ್ನು ಗಲ್ಲಿಗೇರಿಸಬೇಕು ಎಂದು ಯೋಗ ಗುರು, ಪತಂಜಲಿ ಸಂಸ್ಥೆಗಳ ಸೂತ್ರಧಾರ ಬಾಬಾ ರಾಮ್ ದೇವ್ ಹೇಳಿದ್ದಾರೆ.
"ಮಿತಿ ಮೀರುವವರನ್ನು ಜೈಲಿಗಟ್ಟುವುದು ಮಾತ್ರವಲ್ಲ, ಮರಣದಂಡನೆ ಶಿಕ್ಷೆ ವಿಧಿಸಬೇಕು" ರಾಮ್ ದೇವ್ ಹೇಳಿದ್ದಾರೆ. 
"ಕೇಸರಿ ಬಟ್ಟೆಯೊಂದೇ ಧಾರ್ಮಿಕ ನಾಯಕರ ಮಾನದಂಡವಾಗಬಾರದು, ಎಲ್ಲಾ ಕೆಲಸಗಳಿಗೆ ಒಂದು ಶಿಷ್ಟಾಚಾರವಿದೆ, ಅದರದೇ ಮಿತಿಗಳಿವೆ. ಬಾಬಾ, ಯೋಗಿಗಳಿಗೆ ಸಹ ಇದು ಅನ್ವಯ. ಕೇಸರಿ ಬಣ್ಣದ ಬಟ್ಟೆ ಧರಿಸಿದ ಮಾತ್ರಕ್ಕೆ ಯಾರೂ ದೇವಮಾನವರಾಗುವುದಿಲ್ಲ" ಅವರು ಹೇಳಿದ್ದಾರೆ.
ಸ್ವಯಂಘೊಷಿತ ದೇವಮಾನವನೊಬ್ಬರ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಮ್ ದೇವ್ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT