ಜಾವೇದ್ ಅಖ್ತರ್ 
ದೇಶ

ಗೋ ಹತ್ಯೆ ಹೇಳಿಕೆ: ಕರ್ನಾಟಕದ ಮೌಲ್ವಿ ಬಂಧನಕ್ಕೆ ಜಾವೇದ್ ಅಖ್ತರ್ ಆಗ್ರಹ

ರಂಜಾನ್ ಹಬ್ಬದಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಬಿಜಾಪುರದ ಮೌಲ್ವಿ ತನ್ವೀರ್ ಪೀರಾ...

ಬೆಂಗಳೂರು: ರಂಜಾನ್ ಹಬ್ಬದಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಬಿಜಾಪುರದ ಮೌಲ್ವಿ ತನ್ವೀರ್ ಪೀರಾ ಹಾಶಿಮ್ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಖ್ಯಾತ ಉರ್ದು ಕವಿ ಜಾವೇದ್ ಅಖ್ತರ್ ಅವರು ಆಗ್ರಹಿಸಿದ್ದಾರೆ.
ಬಕ್ರೀದ್ ವೇಳೆ ಗೋವುಗಳನ್ನು ಕೊಲ್ಲುತ್ತೇವೆ ಎಂಬ ಮೌಲ್ವಿ ಹೇಳಿಕೆ ಬೇಜವಾಬ್ದಾರಿತನದ್ದು ಮತ್ತು ಅತಿರೇಕದ್ದು ಎಂದು ಅಖ್ತರ್ ಹೇಳಿದ್ದಾರೆ.
ಜಾತ್ಯತೀತತೆ ಎಂದರೆ ಅಲ್ಪಸಂಖ್ಯಾತ ಕೋಮುವಾದವನ್ನು ಕಡೆಗಣಿಸುವುದು ಅಥವಾ ಸಹಿಸಿಕೊಳ್ಳುವುದು ಎಂದಲ್ಲ. ಈ ಬೇಜವಾಬ್ದಾರಿಯುತ ಮತ್ತು ಅತಿರೇಕದ ಹೇಳಿಕೆ ನೀಡಿದ ಮೌಲ್ವಿ ತನ್ವೀರ್ ಹಾಶಿಮ್ ನನ್ನು ತಕ್ಷಣವೇ ಬಂಧಿಸಬೇಕು ಎಂದು ಅಖ್ತರ್ ಟ್ವೀಟ್ ಮಾಡಿದ್ದಾರೆ.
ಜೂನ್ 16ರಂದು ವಿಜಯಪುರದಲ್ಲಿ ನಡೆದ ರಂಜಾನ್ ಆಚರಣೆಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೌಲ್ವಿ, ಮುಂದಿನ ತಿಂಗಳುಗಳಲ್ಲಿ ಬಕ್ರೀದ್ ಬರುತ್ತದೆ ಆಗ ನಾವು ಗೋವುಗಳನ್ನು ಕೊಲ್ಲುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT