ಶಿವರಾಜ್ ಸಿಂಗ್ ಚೌಹ್ಹಾಣ್ 
ದೇಶ

ಮಧ್ಯ ಪ್ರದೇಶ: ಹೊಸ ಸಚಿವರಿಗೆ 'ಗೋ ಸಚಿವಾಲಯ' ಬೇಕಂತೆ!

ಮಧ್ಯಪ್ರದೇಶ ಸರ್ಕಾರದ ಹೊಸ ಕ್ಯಾಬಿನೆಟ್ ಸಚಿವರಾಗಿ ನೇಮಕವಾಗಿರುವ ಸ್ವಾಮಿ ಅಖಿಲೇಶ್ವರಾನಂದ ರಾಜ್ಯದಲ್ಲಿ ಗೋ ಸಚಿವಾಲಯ ರಚಿಸುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಒತ್ತಾಯಿಸಿದ್ದಾರೆ.

ಭೂಪಾಲ್: ಮಧ್ಯಪ್ರದೇಶ ಸರ್ಕಾರದ  ಹೊಸ ಕ್ಯಾಬಿನೆಟ್ ಸಚಿವರಾಗಿ ನೇಮಕವಾಗಿರುವ  ಸ್ವಾಮಿ ಅಖಿಲೇಶ್ವರಾನಂದ ರಾಜ್ಯದಲ್ಲಿ ಗೋ ಸಚಿವಾಲಯ ರಚಿಸುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್  ಅವರನ್ನು ಒತ್ತಾಯಿಸಿದ್ದಾರೆ.

ರಾಜಸ್ತಾನದಲ್ಲಿ  ಗೋ  ಸಚಿವಾಲಯವಿರುವಂತೆ  ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ  ಮಧ್ಯಪ್ರದೇಶದಲ್ಲೂ  ಗೋ ಸಚಿವಾಲಯ ರಚಿಸಬೇಕೆಂದು ಅವರು ಮುಖ್ಯಮಂತ್ರಿ ಬಳಿ ಮನವಿ ಮಾಡಿಕೊಂಡಿದ್ದಾರೆ.
  ಗೋ ಸಚಿವಾಲಯ ಸ್ಥಾಪನೆಯಿಂದ ಗೋ ಅನ್ನು ಇತರ ಪ್ರಾಣಿಗಳಿಂದ ವಿಂಗಂಡಿಸಬಹುದಲ್ಲದೇ ಬಜೆಟ್ ನಲ್ಲಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಪಡೆಯಬಹುದು ಎಂದು ಅವರು ಹೇಳಿದ್ದಾರೆ.
ಈ ಯೋಜನೆಯಲ್ಲಿ ರಾಜ್ಯಸರ್ಕಾರ 15 ಸಾವಿರ ಕೋಟಿ ರೂ ಪಡೆಯಬಹುದಾಗಿದ್ದು, ಅದರಲ್ಲಿ ಅರ್ಧದಷ್ಟು ಮಾತ್ರ ಖರ್ಚು ಮಾಡುವುದಾಗಿ ಸಿಎಂ ಹೇಳಿದ್ದಾರೆ. ಆದ್ದರಿಂದ ಇದು ವ್ಯರ್ಥವಾಗುವುದು ಬೇಡ, ನೀವು ಗೋ ಸಂರಕ್ಷಣೆ ಮಂಡಳಿಯ ಭಾಗವಾಗಿದ್ದು, ನನ್ನಗೆ 1 ಸಾವಿರ ಕೋಟಿ ರೂಪಾಯಿ ಬಜೆಟ್ ಕೊಟ್ಟರೆ  ಶಕ್ತಿ ತುಂಬುವುದಾಗಿ ಅವರು ಹೇಳಿದ್ದೇನೆ. ನಾನೇನೂ ಅಸಂವಿಧಾನಿಕ ಬೇಡಿಕೆ ಇಟ್ಟಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ರಾಜ್ಯ ಗೋ ಸಂರಕ್ಷಣಾ ಮಂಡಳಿಯ ಮಾಡಿ ಅಧ್ಯಕ್ಷರಾಗಿದ್ದ ಅಖಿಲೇಶ್ವರಾನಂದ ಅವರನ್ನು ಜೂನ್ 13 ರಂದು ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಲಾಗಿದೆ. ಇದಕ್ಕೂ ಮುಂಚೆ ಅವರು ರಾಜ್ಯಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT