ಭಾರತೀಯ ಸೇನೆ 
ದೇಶ

ಉಗ್ರರಿಗೆ ಕರುಣೆ ತೋರಿಸುವುದಿಲ್ಲ: ಕಾಶ್ಮೀರಕ್ಕೆ ಬಿಜೆಯ ಹೊಸ ನೀತಿ!

ಜಮ್ಮ ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮೈತ್ರಿಗೆ ವಿದಾಯ ಹೇಳಿದ್ದು ಇದರ ಬೆನ್ನಲ್ಲೇ ಇದೀಗ ಕಾಶ್ಮೀರದಲ್ಲಿ ಹೆಚ್ಚುತ್ತಿರುವ...

ನವದೆಹಲಿ: ಜಮ್ಮ ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮೈತ್ರಿಗೆ ವಿದಾಯ ಹೇಳಿದ್ದು ಇದರ ಬೆನ್ನಲ್ಲೇ ಇದೀಗ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಮಟ್ಟ ಹಾಕುವ ಸಲುವಾಗಿ ದಿಟ್ಟ ನಿರ್ಣಯವನ್ನು ಕೈಗೊಂಡಿದೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷವು ಭಯೋತ್ಪಾಕರಿಗೆ ಯಾವುದೇ ಕರುಣೆ ತೋರಿಸುವುದಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಖಡಕ್ ಆಗಿ ಹೇಳಿದ್ದಾರೆ. 
ರಾಜ್ಯದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸಲು ಪಿಡಿಪಿಯ ಮೆಹಬೂಬಾ ಮುಫ್ತಿ ಮತ್ತು ಎನ್ಸಿಎಸ್ ಪಕ್ಷದ ಒಮರ್ ಅಬ್ದುಲ್ಲಾ ಇಬ್ಬರು ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು ವಿರೋಧಿಸಿದ್ದರು ಎಂದು ರಾಮ್ ಮಾಧವ್ ಹೇಳಿದ್ದಾರೆ. 
ಪಾಕಿಸ್ತಾನ ಹಾಗೂ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವುದು, ಸೇನೆ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವುದು, ಏಕಪಕ್ಷೀಯವಾಗಿ ಕದನ ವಿರಾಮ ಹಾಕುವುದು ಇಂತಹ ಬೇಡಿಕೆಗಳು ಪಿಡಿಪಿ ಮುಂದಿಟ್ಟಿತ್ತು. ಇದೆಲ್ಲಾ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವುದಿಲ್ಲ ಎಂದು ನಾವು ಹಲವು ಬಾರಿ ಹೇಳಿದ್ದೇವು ಎಂದು ರಾಮ್ ಮಾಧವ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT