ಭಾರತೀಯ ಸೇನೆ 
ದೇಶ

ಉಗ್ರರಿಗೆ ಕರುಣೆ ತೋರಿಸುವುದಿಲ್ಲ: ಕಾಶ್ಮೀರಕ್ಕೆ ಬಿಜೆಯ ಹೊಸ ನೀತಿ!

ಜಮ್ಮ ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮೈತ್ರಿಗೆ ವಿದಾಯ ಹೇಳಿದ್ದು ಇದರ ಬೆನ್ನಲ್ಲೇ ಇದೀಗ ಕಾಶ್ಮೀರದಲ್ಲಿ ಹೆಚ್ಚುತ್ತಿರುವ...

ನವದೆಹಲಿ: ಜಮ್ಮ ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮೈತ್ರಿಗೆ ವಿದಾಯ ಹೇಳಿದ್ದು ಇದರ ಬೆನ್ನಲ್ಲೇ ಇದೀಗ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಮಟ್ಟ ಹಾಕುವ ಸಲುವಾಗಿ ದಿಟ್ಟ ನಿರ್ಣಯವನ್ನು ಕೈಗೊಂಡಿದೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷವು ಭಯೋತ್ಪಾಕರಿಗೆ ಯಾವುದೇ ಕರುಣೆ ತೋರಿಸುವುದಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಖಡಕ್ ಆಗಿ ಹೇಳಿದ್ದಾರೆ. 
ರಾಜ್ಯದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸಲು ಪಿಡಿಪಿಯ ಮೆಹಬೂಬಾ ಮುಫ್ತಿ ಮತ್ತು ಎನ್ಸಿಎಸ್ ಪಕ್ಷದ ಒಮರ್ ಅಬ್ದುಲ್ಲಾ ಇಬ್ಬರು ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು ವಿರೋಧಿಸಿದ್ದರು ಎಂದು ರಾಮ್ ಮಾಧವ್ ಹೇಳಿದ್ದಾರೆ. 
ಪಾಕಿಸ್ತಾನ ಹಾಗೂ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವುದು, ಸೇನೆ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವುದು, ಏಕಪಕ್ಷೀಯವಾಗಿ ಕದನ ವಿರಾಮ ಹಾಕುವುದು ಇಂತಹ ಬೇಡಿಕೆಗಳು ಪಿಡಿಪಿ ಮುಂದಿಟ್ಟಿತ್ತು. ಇದೆಲ್ಲಾ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವುದಿಲ್ಲ ಎಂದು ನಾವು ಹಲವು ಬಾರಿ ಹೇಳಿದ್ದೇವು ಎಂದು ರಾಮ್ ಮಾಧವ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT