ದೇಶ

ಕಾಂಗ್ರೆಸ್ ಪಕ್ಷದಿಂದ ದಿಗ್ವಿಜಯ್ ಸಿಂಗ್ ಅಮಾನತುಗೊಳಿಸುವಂತೆ ಬಿಜೆಪಿ ಆಗ್ರಹ

Nagaraja AB

ನವದೆಹಲಿ: ಸಾವಿರಾರು ಹಿಂದೂಗಳನ್ನು ಉಗ್ರರೆಂದು ಕರೆದಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕೆಂದು  ಬಿಜೆಪಿ ಆಗ್ರಹಿಸಿದೆ.

ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹಿಂದೂಗಳನ್ನು ಭಯೋತ್ಪಾದಕರು ಎಂದು ಕರೆಯುವ ಮೂಲಕ ದಿಗ್ವಿಜಯ್ ಸಿಂಗ್  ಹಿಂದೂ ಧರ್ಮ ಹಾಗೂ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.

ಹಿಂದೂಗಳ ಬಗ್ಗೆಯೇ ಏಕೆ ದಿಗ್ವಿಜಯ್ ಸಿಂಗ್ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದು, ರಾಹುಲ್ ಗಾಂಧಿ  ಅವರನ್ನು ಮೆಚ್ಚಿಸುವ ಸಲುವಾಗಿ  ದಿಗ್ವಿಜಯ್ ಸಿಂಗ್  ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ,.

SCROLL FOR NEXT