ಹಿಂದು-ಮುಸ್ಲಿಂ ದಂಪತಿಗೆ ಅವಮಾನ ಪ್ರಕರಣ: ಪಾಸ್'ಪೋರ್ಟ್ ಅಧಿಕಾರಿ ವರ್ಗಾವಣೆ 
ದೇಶ

ಹಿಂದು-ಮುಸ್ಲಿಂ ದಂಪತಿಗೆ ಅವಮಾನ ಪ್ರಕರಣ: ಪಾಸ್'ಪೋರ್ಟ್ ಅಧಿಕಾರಿ ವರ್ಗಾವಣೆ

ಹಿಂದು-ಮುಸ್ಲಿಂ ದಂಪತಿಗಳಿಗೆ ಅವಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಸ್ ಪೋರ್ಟ್ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...

ಲಖನೌ; ಹಿಂದು-ಮುಸ್ಲಿಂ ದಂಪತಿಗಳಿಗೆ ಅವಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಸ್ ಪೋರ್ಟ್ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಪಾಸ್ ಪೋರ್ಟ್ ಅಧಿಕಾರಿ ಪಿಯೂಷ್ ವರ್ಮಾ ಅವರು, ದಂಪತಿಗಳಿಗೆ ಅವಮಾನ ಮಾಡಿದ್ದ ಅಧಿಕಾರಿಗಳಿಗೆ ಈಗಾಗಲೇ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ದಂಪತಿಗಳಾಗ ಮೊಹಮ್ಮದ್ ಅನಾಸ್ ಸಿದ್ದಿಕಿ ಮತ್ತು ತಾನ್ವಿ ಸೇಠ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿ ಮಾಡಿ ಪಾಸ್ ಪೋರ್ಟ್ ಗಳನ್ನು ನೀಡಲಾಗಿದೆ. ಪ್ರಕರಣ ಸಂಬಂಧ ವಿದೇಶಾಂಗ ಸಚಿವಾಲಯಕ್ಕೆ ವರದಿಯನ್ನು ಸಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಘಟನೆಗೆ ಆರ್'ಪಿಒ ವಿಷಾದ ವ್ಯಕ್ತಪಡಿಸುತ್ತದೆ. ಇಂತಹ ಘಟನೆಗಳು ಮರುಕಳುಹಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಧಿಕಾರಿ ವಿಕಾಸ್ ಮಿಶ್ರಾ ಅವರು, ಮದುವೆ ಸಂದರ್ಭದಲ್ಲಿ ಮಹಿಳೆ ಶಾದಿಯಾ ಅನಾಸ್ ಎಂದು ಹೆಸರು ನೀಡಿದ್ದು, ವಿವಾಹ ಪ್ರಮಾಣದಲ್ಲಿರುವ ಹೆಸರನ್ನು ನೀಡುವಂತೆ ತಿಳಿಸಿದ್ದೆ. ಆದರೆ, ಅದಕ್ಕೆ ಮಹಿಳೆ ನಿರಾಕರಿಸಿದ್ದರು ಎಂದು ಹೇಳಿದ್ದಾರೆ. 
ಹಿಂದು-ಮುಸ್ಲಿಂ ದಂಪತಿಗಳಿಗೆ ಅವಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ವಿವಾಹ ಸಂದರ್ಭದಲ್ಲಿ ಮಹಿಳೆ ತನ್ನ ಹೆಸರನ್ನು ಶಾದಿಯಾ ಅನಾಸ್ ಎಂಬ ಹೆಸರನ್ನು ನೀಡಿದ್ದು, ಈ ಹೆಸರನ್ನು ನೀಡುವಂತೆ ತಾನ್ವಿ ಸೇಠ್ ಅವರಿಗೆ ತಿಳಿಸಿದ್ದೆ. ಆದರೆ, ಅದಕ್ಕೆ ಅವರು ನಿರಾಕರಿಸಿದ್ದರು. ಪಾಸ್ ಪೋರ್ಟ್ ಪಡೆಯುವ ಸಲುವಾಗಿ ವ್ಯಕ್ತಿಗಳು ತಮ್ಮ ಹೆಸರನ್ನು ಬದಲಾಯಿಸುತ್ತಿಲ್ಲ ಎಂಬುದನ್ನು ನಾವು ಪರಿಶೀಲನೆ ನಡೆಸಬೇಕು. ಹೀಗಾಗಿ ಮಹಿಳೆಗೆ ಮದುವೆಯಾದ ಬಳಿಕದ ಹೆಸರನ್ನು ನೀಡುವಂತೆ ತಿಳಿಸಲಾಗಿತ್ತು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT