ಭೋಪಾಲ್: 65 ವರ್ಷದ ದಲಿತ ರೈತನ ಸಜೀವ ದಹನ: ನಾಲ್ವರ ಬಂಧನ 
ದೇಶ

ಭೋಪಾಲ್: 65 ವರ್ಷದ ದಲಿತ ರೈತನ ಸಜೀವ ದಹನ: ನಾಲ್ವರ ಬಂಧನ

62 ವರ್ಷದ ದಲಿತ ರೈತನನ್ನು ಸಜೀವ ದಹನ ಮಾಡಿರುವ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಒಂದೇ ಕುಟುಂಬದ ನಾಲ್ವರನ್ನು ಬಂಧಿಸಲಾಗಿದೆ.

ಭೋಪಾಲ್: 62 ವರ್ಷದ ದಲಿತ ರೈತನನ್ನು ಸಜೀವ ದಹನ ಮಾಡಿರುವ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಒಂದೇ ಕುಟುಂಬದ ನಾಲ್ವರನ್ನು ಬಂಧಿಸಲಾಗಿದೆ. 
ಭೋಪಾಲ್ ನಿಂದ 70 ಕಿಮೀ ದೂರದಲ್ಲಿರುವ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಸಹಾಯಕಳಾಗಿದ್ದ ಪತ್ನಿಯ ಎದುರೇ ಕಿಶೋರಿಲಾಲ್ ಜತವ್ ನ್ನು ಸಜೀವದಹನ ಮಾಡಲಾಗಿದೆ.  ರೈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತನನ್ನು ಬದುಕಿಸಲು ಸಾಧ್ಯವಾಗಲಿಲ್ಲ. 
ಭೋಪಾಲ್ ಉತ್ತರ ಭಾಗದ ಎಸ್ ಪಿ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ರೈತನನ್ನು ಹತ್ಯೆ ಮಾಡಿದ ತಿರನ್ ಸಿಂಗ್ ಯಾದವ್ ಆತನ ಪುತ್ರ ಪ್ರಕಾಶ್, ಇಬ್ಬರು ಸಂಬಂಧಿಕರಾದ ಸಂಜು ಹಾಗೂ ಬಲ್ಬೀರ್ ರನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 
ಕಿಶೋರಿಲಾಲ್ ಕುಟುಂಬದವರು ಹಲವು ವರ್ಷಗಳಿಂದ ಕೃಷಿ ಮಾಡುತ್ತಿದ್ದ ಭೂಮಿಯಲ್ಲಿ ಯಾದವ್ ಹಾಗೂ ಇತರ ನಾಲ್ಕು ಮಂದಿ ಟ್ರಾಕ್ಟರ್ ನಲ್ಲಿ ಉಳುಮೆ ಮಾಡಿದ್ದನ್ನು ಕಂಡ ಕಿಶೋರಿಲಾಲ್ ಅದನ್ನು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಕಿಶೋರಿ ಲಾಲ್ ಮೇಲೆ ಹಲ್ಲೆ ನಡೆದಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಈ ಘಟನೆ ಕಿಶೋರಿಲಾಲ್ ರ ಪತ್ನಿ ಎದುರೇ ನಡೆದಿದ್ದು ಅಸಹಾಯಕಳಾಗಿದ್ದ ಪತ್ನಿ ಕುಟುಂಬ ಸದಸ್ಯರಿಗೆ ಹಾಗೂ ನೆರೆಯವರಿಗೆ ವಿಷಯ ಮುಟ್ಟಿಸಿದ್ದಾರೆ. ಎಲ್ಲಾ ಪ್ರಯತ್ನಗಳ ನಡುವೆಯೂ ಕಿಶೋರಿಲಾಲ್ ನ್ನು ಉಳಿಸಿಕೊಳ್ಳುವುದು ಸಾಧ್ಯವಾಗಲಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT