ಕಾಂಗ್ರೆಸ್ ನಾಯಕ ಮತ್ತು ಕೇಂದ್ರ ಮಾಜಿ ಸಚಿವ ಸೈಫುದ್ದೀನ್ ಸೋಜ್ 
ದೇಶ

ಕಾಶ್ಮೀರ ಕುರಿತ ಮುಷರಫ್ ಹೇಳಿಕೆಗೆ ಸಮರ್ಥನೆ; ಪಾಕ್'ಗೆ ತೆರಳಲು ಸೈಫುದ್ದೀನ್'ಗೆ 'ಒನ್ ವೇ ಟಿಕೆಟ್' ಆಫರ್ ನೀಡಿದ ಬಿಜೆಪಿ

ಕಾಶ್ಮೀರ ವಿವಾದ ಕುರಿತಂತೆ ಪಾಕಿಸ್ತಾನ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಕೇಂದ್ರ ಮಾಜಿ ಸಚಿವ ಸೈಫುದ್ದೀನ್ ಸೋಜ್ ಅವರಿಗೆ ಪಾಕಿಸ್ತಾನಕ್ಕೆ ತೆರಳಲು ಬಿಜೆಪಿ 'ಒನ್ ವೇ ಟಿಕೆಟ್' ಆಫರ್ ನೀಡಿದೆ...

ನವದೆಹಲಿ: ಕಾಶ್ಮೀರ ವಿವಾದ ಕುರಿತಂತೆ ಪಾಕಿಸ್ತಾನ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ನಾಯಕ ಮತ್ತು ಕೇಂದ್ರ ಮಾಜಿ ಸಚಿವ ಸೈಫುದ್ದೀನ್ ಸೋಜ್ ಅವರಿಗೆ ಪಾಕಿಸ್ತಾನಕ್ಕೆ ತೆರಳಲು ಬಿಜೆಪಿ 'ಒನ್ ವೇ ಟಿಕೆಟ್' ಆಫರ್ ನೀಡಿದೆ. 
ಸೈಫುದ್ದೀನ್ ಸೋಜ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು, ಭಾರತದಲ್ಲಿ ಇರಲು ಯಾರೇ ಇಚ್ಚಿಸಿದರೂ, ಸಂವಿಧಾನಕ್ಕೆ ತಲೆಬಾಗಲೇಬೇಕು. ಒಂದು ವೇಳೆ ಮುಷರಪ್ ಅವರನ್ನು ಇಷ್ಟ ಪಡುವುದಾದರೆ, ಅವರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಎಡಪಂಥೀಯರಿಂದ ತಮ್ಮ ಪುತ್ರಿ ಅಪಹರಣಕ್ಕೀಡಾಗಿದ್ದಾಗ ಅಂದು ಸಚಿವರಾಗಿದ್ದ ಸೈಫುದ್ದೀನ್ ಅವರು ಕೇಂದ್ರದ ಶಕ್ತಿ ಹಾಗೂ ಸಚಿವ ಸ್ಥಾನ ಅವರಿಗೆ ಲಾಭವಾಗಿತ್ತು. ಇಂತಹ ಜನರಿಗೆ ಸಹಾಯ ಮಾಡಿದ್ದರಿಂದ ಯಾವುದೇ ಸಹಾಯವಾಗಿಲ್ಲ. ನಮ್ಮ ದೇಶದಲ್ಲಿ ಇರಲು ಬಯಸುವವರು ಇಲ್ಲಿನ ಸಂವಿಧಾನಕ್ಕೆ ತಲೆ ಬಾಗಬೇಕು. ಒಂದು ವೇಳೆ ಮುಷರಫ್ ಅವರನ್ನು ಇಷ್ಟಪಡುವುದಾದರೆ, ಅವರಿಗೆ ಪಾಕಿಸ್ತಾನಕ್ಕೆ ತೆರಳಲು ಒನ್ ವೇ ಟಿಕೆಟ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಇದರಂತೆ ಬಿಜೆಪಿ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಯವರು ಸೈಫುದ್ದೀನ್ ಸೋಜ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. 
ಪ್ರತ್ಯೇಕತಾವಾದಿಗಳು ಮತ್ತು ಉಗ್ರರಿ ನೈತಿಕ ಸ್ಥೈರ್ಯ ಹೆಚ್ಚಿಸುವಂತ ಹೇಳಿಕೆಯನ್ನು ಯಾರೇ ಆದರೂ ನೀಡಬಾರದು. ಕಾಶ್ಮೀರ ವಿವಾದ ಅತ್ಯಂತ ಗಂಭೀರ ವಿಚಾರ. ರಾಜ್ಯದ ಶಾಂತಿ, ಅಭಿವೃದ್ಧಿ ಹಾಗೂ ಬೆಳವಣಿಗೆಯನ್ನು ಪ್ರತ್ಯೇಕತಾವಾದಿಗಳು ಹಾಗೂ ಉಗ್ರರು ಹೈಜಾಕ್ ಮಾಡಿದ್ದಾರೆ. ಇಂತಹ ಶಕ್ತಿಗಳನ್ನು ವಿಫಲಗೊಳ್ಳುವಂತೆ ಮಾಡಲು ನಾವೆಲ್ಲರೂ ಒಗ್ಗೂಡಿ ಮುಂದಕ್ಕೆ ಬರಬೇಕು. ಪ್ರತ್ಯೇಕತಾವಾದಿಗಳು ಹಾಗೂ ಉಗ್ರರ ನೈತಿಕ ಸ್ಥೈರ್ಯ ಹೆಚ್ಚಿಸುವ ಹೇಳಿಕೆಗಳನ್ನು ಯಾರೇ ಆದರೂ ನೀಡಬಾರದು ಎಂದು ತಿಳಿಸಿದ್ದಾರೆ. 
ಇದರಂತೆ ಶಿವಸೇನೆ ಕೂಡ ಹೇಳಿಕೆಯನ್ನು ಖಂಡಿಸಿದ್ದು, ಸೈಫುದ್ದೀನ್ ಅವರ ಹೇಳಿಕೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದೆ. 
ತಮ್ಮ ಪಕ್ಷದ ನಾಯಕರೊಬ್ಬರು ನೀಡಿರುವ ಕುರಿತಂತೆ ರಾಹುಲ್ ಗಾಂಧಿ ಸ್ಪಷ್ಟನೆ ನೀಡಬೇಕು. ಸೈಫುದ್ದೀನ್ ಅವರಿಗೆ ಪಾಕಿಸ್ತಾನದ ಮೇಲೆ ಹಾಗೂ ಮುಷರಫ್ ಅವರ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ, ಅವರು ಪಾಕಿಸ್ತಾನಕ್ಕೆ ವಲಸೆ ಹೋಗಲಿ. ಅವರ ಸೇವಕರಾಗಿರಲಿ ಎಂದು ಶಿವಸೇನೆ ನಾಯಕ ಮನೀಶ್ ಕಯಾಂಡೆಯವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT