ಗೋ ಸಾಗಾಟಗಾರನ ಹತ್ಯೆ ಪ್ರಕರಣ: ಅಂಬ್ಯುಲೆನ್ಸ್ ಲಭ್ಯವಿರದ ಕಾರಣ ಪೋಲೀಸ್ ವಾಹನ ಬಳಕೆ, ಯುಪಿ ಪೋಲೀಸ್ 
ದೇಶ

ಗೋ ಸಾಗಾಟಗಾರನ ಹತ್ಯೆ ಪ್ರಕರಣ: ಅಂಬ್ಯುಲೆನ್ಸ್ ಲಭ್ಯವಿರದ ಕಾರಣ ಪೋಲೀಸ್ ವಾಹನ ಬಳಕೆ, ಯುಪಿ ಪೋಲೀಸ್

ಉತ್ತರ ಪ್ರದೇಶದ ಹಾಪುರ್ ನಲ್ಲಿ ಗೋ ಸಾಗಣೆ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ ದಿನ ಸಂತ್ರಸ್ತನನ್ನು....

ಲಖನೌ(ಉತ್ತರ ಪ್ರದೇಶ)" ಉತ್ತರ ಪ್ರದೇಶದ ಹಾಪುರ್ ನಲ್ಲಿ ಗೋ ಸಾಗಣೆ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ ದಿನ ಸಂತ್ರಸ್ತನನ್ನು ಗುಂಪೊಂದು ಪೋಲೀಸರ ಮುಂದೆ ಎಳೆದಾಡುತ್ತಿರುವ ದೃಶ್ಯ ಸಾಮಾಜಿಕ ತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ. ಈ ಸಂಬಂಧ ಉತ್ತರ ಪ್ರದೇಶ ಪೋಲೀಸ್ ಇಲಾಖೆ ಕ್ಷಮೆ ಯಾಚಿಸಿದೆ.
ಸೋಮವಾರ ಪುಖುವಾ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಮೋಟಾರ್ ಸೈಕಲ್ ನಲ್ಲಿ ಆಗಮಿಸಿದ್ದ ಕಾಸಿಮ್ (45) ಮೇಲೆ ಹಲ್ಲೆ ನಡೆದಿದ್ದು ಅವರು ಹತ್ಯೆಯಾಗಿದ್ದರು
ಇದೀಗ ಉತ್ತರ ಪ್ರದೇಶ ಪೋಳೀಸ್ ಇಲಾಖೆ ಮಾಡಿರುವ ಟ್ವೀಟ್ ನಲ್ಲಿ ಘಟನೆ ಸಂಬಂಧ ವಿಷಾದ ವ್ಯಕ್ತಪಡಿಸಿದ್ದಾರೆ.ಹಾಗೆಯೇ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಮೂವರು ಪೋಲೀಸರ ಕುರಿತಂತೆ ಪೋಲೀಸ್ ಲೈನ್ ನಿಂದ ಮಾಹಿತಿ ಕಲೆಹಾಕಲಾಗುವುದು., ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದೆ. 
"ಗಾಯಾಳುವನ್ನು ಶಪತ್ರೆಗೆ ಸ್ಥಳಾಂತರಿಸಲು ಪೋಲೀಸರು ಸ್ಥಳಕ್ಕಾಗಮಿಸಿದಾಗ ಈ ಚಿತ್ರ ತೆಗೆದುಕೊಳ್ಳಲಾಗಿದೆ ಎಂದು ಕಾಣುತ್ತಿದೆ. ಆ ಸಮಯದಲ್ಲಿ ಆಂಬುಲೆನ್ಸ್ ಲಭ್ಯವಿಲ್ಲದ ಕಾರಣದಿಂದಾಗಿ ಅನಿವಾರ್ಯವಾಗಿ ಸಂತ್ರಸ್ತನನ್ನು ಪೋಲೀಸ್ ವಾಹನದಲ್ಲೇ ರವಾನಿಸಬೇಕಾಗಿತ್ತು.ಪೋಲೀಸರು ಸಂವೇದನಾಶೀಲತೆಯಿಂದ ಈ ಕೃತ್ಯ ಎಸಗಿದ್ದಾರೆ. ಅವರು ಒಂದು ಜೀವ ಉಳಿಸುವ ಪ್ರಯತ್ನದಲ್ಲಿದ್ದರು.ಅವರಿಗೆ ಚಿತ್ರದಲ್ಲಿ ಸ್ಪಷ್ಟವಾಗಿರುವಂತೆ ಸಂಸ್ತ್ರಸ್ತನನ್ನು UP100 PRV, ನಲ್ಲಿ ಸಾಗಿಸಲಾಗಿದ್ದೆ"
ನೆರೆ ಹೊರೆಯವರ ಮೇಲೆ ಕಾಸಿಮ್ ಮತ್ತಾತನ ಸ್ನೇಹಿತರು ಹಲ್ಲೆ ನಡೆಸಿದ್ದ ಕಾರಣ ಅವ್ರೂ ಸಹ ಕಾಸಿಮ್ ಮೇಲೆ ಹಲ್ಲೆಗೆ ಮುಂದಾದರೆಂದು ಪೋಲೀಸರು ಹೇಳಿದ್ದಾರೆ.ಸಧ್ಯ ಪೋಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.ಗೋಹತ್ಯೆ ಸಂಬಂಧ ಕೆಲ ವದಂತಿಗಳು ಹರಡಿದ್ದವು, ಆದರೆ ತನಿಖೆ ವೇಳೆ ಅದು ನಿಜವೆಂದು ಕಂಡುಬಂದಿಲ್ಲ ಎಂದು ಎಸ್ಪಿ ಸಂಕಲ್ಪ್ ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

'ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆ ಮಾಡುವ ಉದ್ದೇಶ ನನಗಿಲ್ಲ': ಪೋಪ್ ಲಿಯೋ XIV

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

SCROLL FOR NEXT