ಸಾಂದರ್ಭಿಕ ಚಿತ್ರ 
ದೇಶ

ಸ್ಟೆರ್ಲೈಟ್ ಘಟಕದಿಂದ 1, 300 ಟನ್ ಸಲ್ಫರಿಕ್ ಆಸಿಡ್ ತೆರವು: ತೂತುಕುಡಿ ಜಿಲ್ಲಾಧಿಕಾರಿ

ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕದಲ್ಲಿ ಸಲ್ಫರಿಕ್ ಆಸಿಡ್ ಸೋರಿಕೆಯಾಗುತ್ತಿರುವುದು...

ತೂತುಕುಡಿ: ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕದಲ್ಲಿ ಸಲ್ಫರಿಕ್ ಆಸಿಡ್ ಸೋರಿಕೆಯಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ 1,300 ಟನ್ ಆಸಿಡ್ ಅನ್ನು ಘಟಕದ ಆವರಣದಿಂದ ತೆರವುಗೊಳಿಸಲಾಗಿದೆ ಎಂದು ತೂತುಕುಡಿ ಜಿಲ್ಲಾಧಿಕಾರಿ ಶನಿವಾರ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಸಂದೀಪ್ ನಂದೂರಿ ಅವರು, ಒಟ್ಟು 75 ಟ್ಯಾಂಕರ್ ಗಳ ಮೂಲಕ 1300 ಟನ್ ಸಲ್ಫರಿಕ್ ಆಸಿಡ್ ಅನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಜೂನ್ 17ರಂದು ತೂತುಕುಡಿಯ ತಾಮ್ರ ಸಂಸ್ಕರಣಾ ಘಟಕದಲ್ಲಿ ಆಸಿಡ್ ಸೋರಿಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದು ಸ್ಥಳೀಯ ನಿವಾಸಿಗಳ ಆತಂಕಕ್ಕೆ ಕಾರಣವಾಗಿತ್ತು.
ಈ ಸಂಬಂಧ ಮದ್ರಾಸ್‌ ಹೈಕೋರ್ಟ್ ಗೆ ದಾವೆ ಸಲ್ಲಿಸಿದ್ಗ ವೇದಾಂತ ಸಂಸ್ಥೆ, ಸೋರಿಕೆಯನ್ನು ನಿಯಂತ್ರಿಸಲು ವಿದ್ಯುತ್‌ ಮರುಸಂಪರ್ಕಗೊಳಿಸಬೇಕು ಎಂದು ಕೋರಿತ್ತು. ಆದರೆ ಸೋರಿಕೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದು ತೂತುಕುಡಿ ಜಿಲ್ಲಾಡಳಿತ ವಾದಿಸಿತ್ತು.
ಹಿಂಸಾತ್ಮಕ ಪ್ರತಿಭಟನೆಯ ನಂತರ ತಮಿಳುನಾಡು ಸರ್ಕಾರ ತೂತುಕುಡಿಯ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕವನ್ನು ಶಾಶ್ವತವಾಗಿ ಮುಚ್ಚಲು ತಮಿಳುನಾಡು ಸರ್ಕಾರ ಆದೇಶಿಸಿತ್ತು. ಅಲ್ಲದೆ ಘಟಕಕ್ಕೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿತ್ತು.
ಮೇ.22 ರಂದು ತೂತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ರೈತರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ನಡೆದ ಪೊಲೀಸ್‌ ಗೋಲಿಬಾರ್ ನಲ್ಲಿ 13 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT