ಶುಜಾತ್ ಬುಖಾರಿಯನ್ನು ಉಲ್ಲೇಖಿಸಿ ಪತ್ರಕರ್ತರಿಗೆ ಎಚ್ಚರಿಕೆ ನೀಡಿದ ಕಾಶ್ಮೀರ ಬಿಜೆಪಿ ನಾಯಕ 
ದೇಶ

ಶುಜಾತ್ ಬುಖಾರಿಯನ್ನು ಉಲ್ಲೇಖಿಸಿ ಪತ್ರಕರ್ತರಿಗೆ ಎಚ್ಚರಿಕೆ ನೀಡಿದ ಕಾಶ್ಮೀರ ಬಿಜೆಪಿ ನಾಯಕ

ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತೊಂದು ವಿವಾದಲ್ಲಿ ಸಿಲುಕಿದ್ದು, ಜಮ್ಮು-ಕಾಶ್ಮೀರ ಮಾಜಿ ಸಚಿವ ಬಿಜೆಪಿ ನಾಯಕ, ಚೌಧರಿ ಲಾಲ್ ಸಿಂಗ್ ಶುಜಾತ್ ಬುಖಾರಿ ಪ್ರಕರಣವನ್ನು ಉಲ್ಲೇಖಿಸಿ

ಶ್ರೀನಗರ: ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತೊಂದು ವಿವಾದಲ್ಲಿ ಸಿಲುಕಿದ್ದು, ಜಮ್ಮು-ಕಾಶ್ಮೀರ ಮಾಜಿ ಸಚಿವ ಬಿಜೆಪಿ ನಾಯಕ, ಚೌಧರಿ ಲಾಲ್ ಸಿಂಗ್ ಶುಜಾತ್ ಬುಖಾರಿ ಪ್ರಕರಣವನ್ನು ಉಲ್ಲೇಖಿಸಿ ಪತ್ರಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ. 
ಅತ್ಯಾಚಾರ ಪ್ರಕರಣವನ್ನು ವರದಿ ಮಾಡುತ್ತಿರುವ ಮಾಧ್ಯಮಗಳು ತಮ್ಮ ನಡೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಬುಖಾರಿ ಪ್ರಕರಣವನ್ನು ಉದಾಹರಣೆಯಾಗಿ ನೀಡಿ ಚೌಧರಿ ಲಾಲ್ ಸಿಂಗ್ ಎಚ್ಚರಿಸಿದ್ದಾರೆ. 
ಬಿಜೆಪಿ-ಪಿಡಿಪಿ ಸರ್ಕಾರದಲ್ಲಿ ಅರಣ್ಯ ಖಾತೆ ಸಚಿವರಾಗಿದ್ದ ಸಿಂಗ್ ಅಧಿಕಾರದಲ್ಲಿದ್ದಾಗಲೇ ಕಥುವಾ ಅತ್ಯಾಚಾರ ಪ್ರಕರಣದ ಆರೋಪಿಯ ಪರವಾಗಿ ರ್ಯಾಲಿ ನಡೆಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೇ ಕಾರಣದಿಂದ ಮಂತ್ರಿ ಪದವಿಯನ್ನೂ ಕಳೆದುಕೊಂಡಿದ್ದರು. 
ಕಥುವಾ ಪ್ರಕರಣದಲ್ಲಿ ಪತ್ರಕರ್ತರು ತಪ್ಪಾದ ವಾತಾವರಣವನ್ನು ನಿರ್ಮಿಸಿದ್ದಾರೆ. ನೀವು ಹೇಗೆ ಪತ್ರಿಕೋದ್ಯಮ ಮಾಡಬೇಕು ಹೇಗೆ ಜೀವಿಸಬೇಕು ಎಂಬುದರ ಬಗ್ಗೆ ಸ್ವಯಂ ನಿಯಂತ್ರಣ ವಿಧಿಸಿಕೊಳ್ಳಬೇಕಾಗಿದೆ ಎಂದು ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಿದ್ದ ಪತ್ರಕರ್ತ, ಪ್ರತ್ಯೇಕತಾವಾದಿ ಬಶರತ್  ಹಾಗೂ ಇತ್ತೀಚೆಗಷ್ಟೇ ಗುಂಡೇಟಿಗೆ ಬಲಿಯಾಗಿದ್ದ ಶುಜಾತ್ ಬುಖಾರಿ ಪ್ರಕ್ರಣವನ್ನು ಉಲ್ಲೇಖಿಸಿ ಬಿಜೆಪಿ ನಾಯಕ ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT