ಸಂಗ್ರಹ ಚಿತ್ರ 
ದೇಶ

ಅಮರನಾಥ ಯಾತ್ರೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು ಹತರಾದ ಇಸಿಸ್ ಉಗ್ರರು!

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಶುಕ್ರವಾರ ನಡೆಸಿದ್ದ ಎನ್'ಕೌಂಟರ್ ನಲ್ಲಿ ಹತರಾದ ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರು ಅಮರನಾಥ ಯಾತ್ರೆ ಸಂದರ್ಭದಲ್ಲಿ ಭಾರೀ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಶುಕ್ರವಾರ ನಡೆಸಿದ್ದ ಎನ್'ಕೌಂಟರ್ ನಲ್ಲಿ ಹತರಾದ ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರು ಅಮರನಾಥ ಯಾತ್ರೆ ಸಂದರ್ಭದಲ್ಲಿ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ. 
ನಿನ್ನೆ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿತ್ತು. ನಾಲ್ವರು ಉಗ್ರರ ಹತ್ಯೆ ಕಾಶ್ಮೀರದಲ್ಲಿ ತನ್ನ ಅಸ್ಥಿತ್ವ ಸ್ಥಾಪಿಸಲು ಯತ್ನ ನಡೆಸುತ್ತಿದ್ದ ಇಸಿಸ್ ಉಗ್ರ ಸಂಘಟನೆಗೆ ದೊಡ್ಡ ಹೊಡೆತ ನೀಡಿದಂತಾಗಿದೆ. 
ಇಸಿಸ್ ಉಗ್ರ ಸಂಘಟನೆಗೆ ಸೇರಿದ ಇನ್ನೂ 2-3 ಉಗ್ರರು ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆಂದು ಹೇಳಲಾಗುತ್ತಿದ್ದು, ಸೇನಾಪಡೆಗಳು ತಮ್ಮ ಕಾರ್ಯಾಚರಣೆಗಳನ್ನು ಮುಂದುವರೆಸಿವೆ. 
ಅಮರನಾಥ ಯಾತ್ರೆಗೆ ಉಗ್ರರ ಬೆದರಿಕೆಗಳಿರುವುದರಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಠಿಣ ತರಬೇತಿಗಳನ್ನು ಪಡೆದುಕೊಕಂಡಿರುವ ಎನ್ಎಸ್'ಜಿ ಪಡೆಗಳು ಅಮರನಾಥ ಯಾತ್ರೆ ವೇಳೆ ಭದ್ರತೆಯನ್ನು ನೀಡಲಿದ್ದು, ಉಗ್ರ ವಿರೋಧಿ ಕಾರ್ಯಾಚರಣೆಗೆ ಬಿಎಸ್ಎಫ್ ಯೋಧರು ಸಾಧ್ ನೀಡಿದ್ದಾರೆ. 
ಜೂನ್ 28 ರಿಂದ ಹಿಮಾಲಯದ ತಪ್ಪಲಲ್ಲಿ ಇರುವ ಅಮರನಾಥ ದೇಗುಲಕ್ಕೆ ಯಾತ್ರೆ ಆರಂಭಗೊಳ್ಳಲಿದೆ. ಎರಡು ತಿಂಗಳುಗಳ ಕಾಲ ಯಾತ್ರೆ ನಡೆಯಲಿದ್ದು, ಆಗಸ್ಟ್ ಅಂತ್ಯದಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್‌ಗಳ ಭರ್ಜರಿ ಜಯ, T20 ಸರಣಿ ಕ್ಲೀನ್ ಸ್ವೀಪ್

'ಮೇಡಂ, ನಿಮ್ಮಂತ ಸುಂದರಿ ಯಾರೂ ಇಲ್ಲ'; ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, CM ಕೋಟಾದಡಿ IAS ಹುದ್ದೆ ಕೊಡಿಸ್ತೇನೆ!

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!