ಸಂಗ್ರಹ ಚಿತ್ರ 
ದೇಶ

ಅಮರನಾಥ ಯಾತ್ರೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು ಹತರಾದ ಇಸಿಸ್ ಉಗ್ರರು!

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಶುಕ್ರವಾರ ನಡೆಸಿದ್ದ ಎನ್'ಕೌಂಟರ್ ನಲ್ಲಿ ಹತರಾದ ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರು ಅಮರನಾಥ ಯಾತ್ರೆ ಸಂದರ್ಭದಲ್ಲಿ ಭಾರೀ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಶುಕ್ರವಾರ ನಡೆಸಿದ್ದ ಎನ್'ಕೌಂಟರ್ ನಲ್ಲಿ ಹತರಾದ ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರು ಅಮರನಾಥ ಯಾತ್ರೆ ಸಂದರ್ಭದಲ್ಲಿ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ. 
ನಿನ್ನೆ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿತ್ತು. ನಾಲ್ವರು ಉಗ್ರರ ಹತ್ಯೆ ಕಾಶ್ಮೀರದಲ್ಲಿ ತನ್ನ ಅಸ್ಥಿತ್ವ ಸ್ಥಾಪಿಸಲು ಯತ್ನ ನಡೆಸುತ್ತಿದ್ದ ಇಸಿಸ್ ಉಗ್ರ ಸಂಘಟನೆಗೆ ದೊಡ್ಡ ಹೊಡೆತ ನೀಡಿದಂತಾಗಿದೆ. 
ಇಸಿಸ್ ಉಗ್ರ ಸಂಘಟನೆಗೆ ಸೇರಿದ ಇನ್ನೂ 2-3 ಉಗ್ರರು ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆಂದು ಹೇಳಲಾಗುತ್ತಿದ್ದು, ಸೇನಾಪಡೆಗಳು ತಮ್ಮ ಕಾರ್ಯಾಚರಣೆಗಳನ್ನು ಮುಂದುವರೆಸಿವೆ. 
ಅಮರನಾಥ ಯಾತ್ರೆಗೆ ಉಗ್ರರ ಬೆದರಿಕೆಗಳಿರುವುದರಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಠಿಣ ತರಬೇತಿಗಳನ್ನು ಪಡೆದುಕೊಕಂಡಿರುವ ಎನ್ಎಸ್'ಜಿ ಪಡೆಗಳು ಅಮರನಾಥ ಯಾತ್ರೆ ವೇಳೆ ಭದ್ರತೆಯನ್ನು ನೀಡಲಿದ್ದು, ಉಗ್ರ ವಿರೋಧಿ ಕಾರ್ಯಾಚರಣೆಗೆ ಬಿಎಸ್ಎಫ್ ಯೋಧರು ಸಾಧ್ ನೀಡಿದ್ದಾರೆ. 
ಜೂನ್ 28 ರಿಂದ ಹಿಮಾಲಯದ ತಪ್ಪಲಲ್ಲಿ ಇರುವ ಅಮರನಾಥ ದೇಗುಲಕ್ಕೆ ಯಾತ್ರೆ ಆರಂಭಗೊಳ್ಳಲಿದೆ. ಎರಡು ತಿಂಗಳುಗಳ ಕಾಲ ಯಾತ್ರೆ ನಡೆಯಲಿದ್ದು, ಆಗಸ್ಟ್ ಅಂತ್ಯದಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT