ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎನ್ಎನ್ ವೊಹ್ರಾ 
ದೇಶ

ಭದ್ರತಾ ಕ್ರಮ ಕೈಗೊಳ್ಳಲಾಗಿದ್ದು, ಅಮರನಾಥ ಯಾತ್ರೆ ವೇಳೆ ಆತಂಕಗೊಳ್ಳುವ ಅಗತ್ಯವಿಲ್ಲ; ಜಮ್ಮು-ಕಾಶ್ಮೀರ ರಾಜ್ಯಪಾಲ

ಅಮರನಾಥ ಯಾತ್ರೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ಹಿನ್ನಲೆಯಲ್ಲಿ ಭದ್ರತೆಗಳನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎನ್ಎನ್ ವೊಹ್ರಾ ಅವರು ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ...

ನವದೆಹಲಿ: ಅಮರನಾಥ ಯಾತ್ರೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ಹಿನ್ನಲೆಯಲ್ಲಿ ಭದ್ರತೆಗಳನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎನ್ಎನ್ ವೊಹ್ರಾ ಅವರು ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಭದ್ರತೆಯನ್ನು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತಂಕಗೊಳ್ಳುವ ಅಗತ್ಯವಿಲ್ಲ. ಅಮರನಾಥ ಯಾತ್ರೆಗೆ ಎಲ್ಲಾ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯಾತ್ರೆ ಶಾಂತಿಯುತವಾಗಿ ನಡೆಯಲಿದೆ ಎಂದು ಹೇಳಿದ್ದಾರೆ. 
ಇದರಂತೆ ಸಿಆರ್'ಪಿಎಫ್ ಕೂಡ ಹೇಳಿಕೆ ನೀಡಿದ್ದು, ಭದ್ರತಾ ಪಡೆಗಳು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲಿದೆ. ಯಾವುದೇ ರೀತಿಯ ದಾಳಿ ನಡೆದರೂ ಅವುಗಳನ್ನು ಎದುರಿಸಲು ಸಿದ್ಧರಿದ್ದೇವೆಂದು ತಿಳಿಸಿದ್ದಾರೆ. 
ಅಮರನಾಥ ಯಾತ್ರೆಗೆ ಉಗ್ರರ ಬೆದರಿಕೆಗಳಿರುವ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರೂ ಕೂಡ ಶೀಘ್ರದಲ್ಲಿಯೇ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆಗಳಿದ್ದು, ಈ ವೇಳೆ ಭದ್ರತೆಗಳನ್ನು ಪರಿಶೀಲನೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. 
ಜೂನ್ 28 ರಿಂದ ಹಿಮಾಲಯದ ತಪ್ಪಲಲ್ಲಿ ಇರುವ ಅಮರನಾಥ ದೇಗುಲಕ್ಕೆ ಯಾತ್ರೆ ಆರಂಭಗೊಳ್ಳಲಿದೆ. ಎರಡು ತಿಂಗಳುಗಳ ಕಾಲ ಯಾತ್ರೆ ನಡೆಯಲಿದ್ದು, ಆಗಸ್ಟ್ ಅಂತ್ಯದಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT