ಶಾಲೆಯ ಚಿತ್ರ 
ದೇಶ

ಶಾಲೆಯ ವಿರುದ್ಧ ಸೇಡಿಗಾಗಿ ಕಿರಿಯ ವಿದ್ಯಾರ್ಥಿ ಕೊಲೆ, 10 ನೇ ತರಗತಿ ಬಾಲಕ ಪೊಲೀಸ್ ವಶ

ವಡೋದರ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ದೇವ್ ತಾದ್ವಿಯನ್ನು , ತಾನೇ ಕೊಲೆ ಮಾಡಿರುವುದಾಗಿ ಶಂಕಿತ ಶ್ರೀ ಭಾರತಿ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ತಪ್ಪೊಪ್ಪಿಕೊಂಡಿದ್ದಾನೆ.

 ವಡೋದರ: ವಡೋದರದ ಶಾಲೆಯೊಂದರಲ್ಲಿ ಶುಕ್ರವಾರ ನಡೆದಿದ್ದ 9 ನೇ ತರಗತಿ ವಿದ್ಯಾರ್ಥಿ ಕೊಲೆ ಪ್ರಕರಣ, ಕಳೆದ ವರ್ಷ ಹರಿಯಾಣದ ಗುರುಗ್ರಾಮ್ ನಲ್ಲಿ ನಡೆದಿದ್ದ ಏಳು ವರ್ಷದ ಬಾಲಕನ ಕೊಲೆ ಪ್ರಕರಣದಂತೆ ಕಂಡುಬಂದಿದೆ.
ಎರಡು ಪ್ರಕರಣದಲ್ಲಿಯೂ ಶೌಚಗೃಹದಲ್ಲಿಯೇ ಕೊಲೆಯಾಗಿದೆ. ಎರಡೂ ಪ್ರಕರಣಗಳಲ್ಲೂ ಹಿಂದಿನ  ವರ್ತನೆಯ ಸಮಸ್ಯೆಗಳನ್ನು ಪ್ರದರ್ಶಿಸಿವೆ.
ವಡೋದರ ಶಾಲೆಯ   9 ನೇ ತರಗತಿಯ ವಿದ್ಯಾರ್ಥಿ ದೇವ್  ತಾದ್ವಿಯನ್ನು , ತಾನೇ  ಕೊಲೆ ಮಾಡಿರುವುದಾಗಿ  ಶಂಕಿತ  ಶ್ರೀ ಭಾರತಿ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ  ತಪ್ಪೊಪ್ಪಿಕೊಂಡಿದ್ದಾನೆ.ಉಪಾದ್ಯಾಯರು ಬೈದಿದ್ದರಿಂದ  ಶಾಲೆ ಮುಚ್ಚಿಸುವ ಸೇಡಿಗಾಗಿ  ಕೊಲೆ ಮಾಡಿದ್ದಾಗಿ  ಆರೋಪಿತ ವಿದ್ಯಾರ್ಥಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಸದಾಗಿ ದಾಖಲಾಗಿದ್ದ 9 ನೇ ತರಗತಿ ವಿದ್ಯಾರ್ಥಿ ತಾದ್ವಿಗೆ ಹಲವು ಬಾರಿ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿತ್ತು.ಆತನ ಮೃತದೇಹದ ಪಕ್ಕದಲ್ಲಿಯೇ  12 ಇಂಚು ಉದ್ದದ ಚಾಕು ದೊರೆತಿತ್ತು.
ಶಾಲೆಗೆ ಹೊಂದಿಕೊಂಡಿರುವ ದೇವಾಲಯದ ಮೇಲ್ಛಾವಣೆಯಲ್ಲಿದ್ದ ಸ್ಯಾಟ್ ಚೆಲ್ ನ್ನು ವಶಪಡಿಸಿಕೊಂಡು  ನೋಡಿದ್ದಾಗ ಅದರಲ್ಲಿ ತೀಕ್ಷ್ಮವಾದ ಸಾಧನಗಳು, ಮೆಣಸಿನಕಾಯಿ ಪುಡಿ, ರಕ್ತಲೇಪಿತ ಶರ್ಟ್  ಕಂಡುಬಂದಿತ್ತು. ತರಗತಿಕೊಠಡಿಯಿಂದ ಆರೋಪಿ ಬ್ಯಾಗ್ ನ್ನು ಅಲ್ಲಿಗೆ ಎಸೆದಿರುವ ಸಾಧ್ಯತೆ ಇದೆ  ಎಂದು  ಪೊಲೀಸರು ಹೇಳಿದ್ದಾರೆ.
 ಆರೋಪಿ ಮೃತಪಟ್ಟ ತಾದ್ವಿ ಜೊತೆ ಯಾವುದೇ ದ್ವೇಷ ಹೊಂದಿರಲಿಲ್ಲ. ತಾದ್ವಿ 10 ದಿನಗಳ ಹಿಂದೆ ದಾಖಲಾದ ಬಗ್ಗೆ ಆತನಿಗೂ ಗೊತಿತ್ತು. ಈ ಹಿಂದೆ ಕೂಡಾ ಆರೋಪಿ ವಿದ್ಯಾರ್ಥಿ ಅನುಚಿತವಾಗಿ ವರ್ತಿಸಿ ಶಿಕ್ಷಕರಿಂದ ಬೈಯಿಸಿಕೊಂಡಿದ್ದ ಎಂದು ವಡೋದಾರ ಪೊಲೀಸ್ ಆಯುಕ್ತ ಮನೋಜ್ ಶಶಿಧರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT