ಸಂಗ್ರಹ ಚಿತ್ರ 
ದೇಶ

ಗುರುದ್ವಾರ ಪ್ರವೇಶಕ್ಕೆ ಭಾರತ ರಾಯಭಾರಿಗೆ ನಿರ್ಬಂಧ: ಪಾಕ್ ವಿರುದ್ಧ ಭಾರತ ತೀವ್ರ ಆಕ್ಷೇಪ

ರಾವಲ್ಪಿಂಡಿಯಲ್ಲಿರುವ ಗುರುದ್ವಾರ ಪಂಜಾ ಸಾಹೀಬ್ ಪ್ರವೇಶಕ್ಕೆ ತೆರಳದಂತೆ ಭಾರತದ ಹೈ ಕಮಿಷನಲ್ ಅಜಯ್ ಬಿಸಾರಿಯಾಗೆ ನಿರ್ಬಂಧ ಹೇರಿರುವ ಹಿನ್ನಲೆಯಲ್ಲಿ ಭಾರತ ಭಾನುವಾರ ಪ್ರತಿಭಟನೆ ವ್ಯಕ್ತಪಡಿಸಿದೆ...

ನವದೆಹಲಿ; ರಾವಲ್ಪಿಂಡಿಯಲ್ಲಿರುವ ಗುರುದ್ವಾರ ಪಂಜಾ ಸಾಹೀಬ್ ಪ್ರವೇಶಕ್ಕೆ ತೆರಳದಂತೆ ಭಾರತದ ಹೈ ಕಮಿಷನಲ್ ಅಜಯ್ ಬಿಸಾರಿಯಾಗೆ ನಿರ್ಬಂಧ ಹೇರಿರುವ ಹಿನ್ನಲೆಯಲ್ಲಿ ಭಾರತ ಭಾನುವಾರ ಪ್ರತಿಭಟನೆ ವ್ಯಕ್ತಪಡಿಸಿದೆ.  
ಗುರುದ್ವಾರ ಪಂಜಾ ಸಾಹೀಬ್ ಪ್ರವೇಶಕ್ಕೆ ಪಾಕಿಸ್ದಾನ ವಿದೇಶಾಂಗ ಸಚಿವಾಲಯ ಪೂರ್ವಾನುಮತಿ ನೀಡಿದ್ದರೂ, ಭಾರತೀಯ ಯಾತ್ರಿಗಳನ್ನು ಅಂಜಯ್ ಬಿಸಾರಿಯಾ ಅವರು ಭೇಟಿ ಮಾಡಲು ಅನುಮತಿ ನಿರಾಕರಿಸಲಾಗಿದೆ. 
ಈ ಹಿನ್ನಲೆಯಲ್ಲಿ ಭಾರತದಲ್ಲಿರುವ ಪಾಕಿಸ್ತಾನದ ಡೆಪ್ಯುಟಿ ಹೈ ಕಮಿಷನರ್ ಸೈಯದ್ದ ಹೈದರ್ ಶಾ ಅವರನ್ನು ಕರೆಸಿಕೊಂಡ ವಿದೇಶಾಂಗ ವ್ಯವಹಾರಕಗಳ ಸಚಿವಾಲಯ ತೀವ್ರ ಪ್ರತಿಭಟನೆ ದಾಖಲಿಸಿದೆ. 
ಧಾರ್ಮಿಕ ಸ್ಥಳಕ್ಕೆ ತೆರಳಿ ಭಾರತೀಯ ಯಾತ್ರಿಕರನ್ನು ಭೇಟಿಯಾಗಲು ಅನುಮತಿ ನಿರಾಕರಿಸುವ ಮೂಲಕ ಪಾಕಿಸ್ತಾನ ರಾಜತಾಂತ್ರಿಕ ಸಂಬಂಧಗಳ ಕುರಿತ 1961ರ ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಭಾರತ ಆರೋಪ ಮಾಡಿದೆ. 
ಪಾಕಿಸ್ತಾನದ ಈ ನಡೆಗೆ ಶಿರೋಮಣಿ ಗುರುದ್ವಾರ ಪ್ರಬಂಧಕ ಸಮಿತಿ (ಎಸ್'ಜಿಸಿಸಿ) ಸೇರಿದಂತೆ ಭಾರತದ ಹಲವು ಸಂಘಟನೆಗಳು ತೀವ್ರವಾಗಿ ಖಂಡಿಸಿದೆ. 
ಯಾತ್ರಿಕರನ್ನು ಭೇಟಿಯಾಗಲು ಭಾರತದ ರಾಯಭಾರಿಗಳಿಗೆ ಪಾಕಿಸ್ತಾನ ಸರ್ಕಾರ ಅನುಮತಿ ನಿರಾಕರಿಸುತ್ತಿರುವುದು ಮೂರು ತಿಂಗಳಲ್ಲಿ ಇದು ಎರಡನೇ ಬಾರಿ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT