ಸಂಗ್ರಹ ಚಿತ್ರ 
ದೇಶ

ಹಿಂದು-ಮುಸ್ಲಿಂ ದಂಪತಿ ಕಿರುಕುಳ ನೀಡಿದ್ದ ಪಾಸ್'ಪೋರ್ಟ್ ಅಧಿಕಾರಿಗೆ ಶಿವಸೇನೆ ಬೆಂಬಲ

ಹಿಂದು-ಮುಸ್ಲಿಂ ದಂಪತಿಗಳಿಗೆ ಕಿರುಕುಳ ನೀಡಿದ ಆರೋಪವನ್ನು ಎದುರಿಸಿರುವ ಲಖನೌ ಪಾಸ್ ಪೋರ್ಟ್ ಅಧಿಕಾರಿಗೆ ಉತ್ತರಪ್ರದೇಶದ ಶಿವಸೇನೆ ಘಟಕ ಬೆಂಬಲ ವ್ಯಕ್ತಪಡಿಸಿದೆ...

ನವದೆಹಲಿ; ಹಿಂದು-ಮುಸ್ಲಿಂ ದಂಪತಿಗಳಿಗೆ ಕಿರುಕುಳ ನೀಡಿದ ಆರೋಪವನ್ನು ಎದುರಿಸಿರುವ ಲಖನೌ ಪಾಸ್ ಪೋರ್ಟ್ ಅಧಿಕಾರಿಗೆ ಉತ್ತರಪ್ರದೇಶದ ಶಿವಸೇನೆ ಘಟಕ ಬೆಂಬಲ ವ್ಯಕ್ತಪಡಿಸಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ನಾಯಕ ಅನಿಲ್ ಸಿಂಗ್ ಅವರು ಉತ್ತರಪ್ರದೇಶ ರಾಜ್ಯಪಾಲ ರಾಮ್ ನಾಯಕ್ ಅವರನ್ನು ಭೇಟಿ ಮಾಡಿದ್ದು, ಪಾಸ್ ಪೋರ್ಟ್ ಅಧಿಕಾರಿ ವಿಕಾಸ್ ಮಿಶ್ರಾ ಅವರ ವರ್ಗಾವಣೆ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ. 
ವಿಕಾಸ್ ಮಿಶ್ರಾ ಅವರು ತಮ್ಮ ಕೆಲಸವನ್ನು ತಾವು ಮಾಡಿದ್ದಾರೆ. ಅಧಿಕಾರಿಯನ್ನು ವರ್ಗಾವಣೆ ಮಾಡುತ್ತಿರುವುದು ನಿಜಕ್ಕೂ ಸರಿಯಲ್ಲ. ಇದು ವಿದೇಶಾಂಗ ಸಚಿವಾಲಯ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತದೆ. ಹಲವು ಭಾರತೀಯರು ಪಾಸ್ ಪೋರ್ಟ್ ಗಾಗಿ ತಿಂಗಳಾನುಗಟ್ಟಲೆ ಕಾಯುತ್ತಿದ್ದರೆ, ತನ್ವಿ ಸೇಠ್ ಹಾಗೂ ಅವರ ಪತಿಗೆ ಕೆಲವೇ ದಿನಗಳಲ್ಲಿ ಪಾಸ್'ಪೋರ್ಟ್ ನೀಡಲಾಗಿದೆ ಎಂದು ಹೇಳಿದ್ದಾರೆ. 
ದಂಪತಿಗಳಿಗೆ ಪಾಸ್'ಪೋರ್ಟ್ ನೀಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಸ್ಲಿಮರನ್ನು ಸಮಾಧಾನ ಪಡಿಸುವ ಯತ್ನ ಮಾಡಿದೆ. ಇದು ರಾಷ್ಟ್ರದ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದ್ದು, ಪ್ರಕರಣ ಸಂಬಂಧ ವಿಕಾಸ್ ಮಿಶ್ರಾ ಅವರಿಗೆ ನಾವು ಬೆಂಬಲ ನೀಡುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT