ಸ್ಟಾಲಿನ್ 
ದೇಶ

ತಮಿಳುನಾಡು ರಾಜ್ಯಪಾಲರ ವಿರುದ್ಧ ಪ್ರತಿಭಟನೆ, ಸ್ಟಾಲಿನ್ ಮೇಲೆ ಕೇಸು ದಾಖಲು

ತಮಿಳುನಾಡಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ಹಾಗೂ ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪೊಲೀಸರು ಇಂದು ದೂರು ದಾಖಲಿಸಿಕೊಂಡಿದ್ದಾರೆ.

ಗೈಂಡಿ: ತಮಿಳುನಾಡಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ  ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ಹಾಗೂ ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪೊಲೀಸರು ಇಂದು  ದೂರು ದಾಖಲಿಸಿಕೊಂಡಿದ್ದಾರೆ.

ಶುಕ್ರವಾರ ತ್ರಿಚಿಯಲ್ಲಿ 192 ಡಿಎಂಕೆ ಕಾರ್ಯಕರ್ತರ ಬಂಧನ ವಿರೋಧಿಸಿ ನಿನ್ನೆ ದಿನ  ರಾಜಭವನದ ಮುಂಭಾಗ ಸ್ಟಾಲಿನ್ ಹಾಗೂ ಪಕ್ಷದ ಇತರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.ರಾಜ್ಯಪಾಲರು ಜಿಲ್ಲೆಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಡಿಎಂಕೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು .

ತ್ರಿಚಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಬಂಧಿಸಿರುವುದರಿಂದ ರಾಜ್ಯಪಾಲರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸ್ಟಾಲಿನ್ ಪ್ರತಿಭಟನೆ ವೇಳೆ ಆಗ್ರಹಿಸಿದರು.
 
ಇಂದಿರಾಗಾಂಧಿ ಸೇರಿದಂತೆ ಅನೇಕ ರಾಜಕೀಯ ನಾಯಕರ ವಿರುದ್ಧ ಡಿಎಂಕೆ ಪಕ್ಷದ ಕಾರ್ಯಕರ್ತರು  ಕಪ್ಪು ಬಾವುಟ ಪ್ರದರ್ಶಿಸಿರುವ ಇತಿಹಾಸವಿದೆ. ಆದರೆ, ಯಾರೊಬ್ಬರು ಬಂಧಿಸಿರಲಿಲ್ಲ. ರಾಜ್ಯಪಾಲರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು  ಸ್ಟಾಲಿನ್ ಒತ್ತಾಯಿಸಿದ್ದರು.

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಒ . ಪನ್ನೀರು ಸೆಲ್ವಂ ,ತಮ್ಮ ಭ್ರಷ್ಟಾಚಾರದ ಭಯದಿಂದ ರಾಜ್ಯಪಾಲರ ವಿರುದ್ದ ಮಾತನಾಡುತ್ತಿಲ್ಲ ಎಂದು ಸ್ಟಾಲಿನ್ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT