ಶಾಸಕ ಟಿಟಿವಿ ದಿನಕರನ್ 
ದೇಶ

ಎಐಎಡಿಎಂಕೆ 18 ಶಾಸಕರ ಅನರ್ಹತೆ ಪ್ರಕರಣ: ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಮದ್ರಾಸ್ ಹೈಕೋರ್ಟ್ ತಮ್ಮ ಶಾಸಕತ್ವ ಅನರ್ಹತೆಗೆ ಸಂಬಂಧಿಸಿದಂತೆ ಎರಡು ಭಿನ್ನ ನಿಲುವು ತಳೆದಿರುವ ಹಿನ್ನೆಲೆಯಲ್ಲಿ ...

ನವದೆಹಲಿ: ಮದ್ರಾಸ್ ಹೈಕೋರ್ಟ್ ತಮ್ಮ ಶಾಸಕತ್ವ ಅನರ್ಹತೆಗೆ ಸಂಬಂಧಿಸಿದಂತೆ ಎರಡು ಭಿನ್ನ ನಿಲುವು ತಳೆದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗೆ ವರ್ಗಾಯಿಸಬೇಕು ಎಂದು ಎಐಎಡಿಎಂಕೆಯ ೧೮ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಜೂನ್ 27ರಂದು ವಿಚಾರಣೆ ನಡೆಸಲು  ಸರ್ವೋಚ್ಚ ನ್ಯಾಯಾಲಯ ಸೋಮವಾರ ಒಪ್ಪಿಕೊಂಡಿದೆ.
ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ ಮತ್ತು ಎಸ್‌ ಕೆ ಕೌಲ್‌ ಅವರನ್ನು ಒಳಗೊಂಡ ರಜಾಕಾಲದ ಪೀಠ, ಎಐಎಡಿಎಂಕೆ 18 ಶಾಸಕರ ಅನರ್ಹತೆಯ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಮದ್ರಾಸ್‌ ಹೈಕೋರ್ಟ್‌ ಎಐಎಡಿಎಂಕೆಯ 18 ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಕಳೆದ ಜೂನ್‌ 14ರಂದು ಒಡಕು ತೀರ್ಪು ನೀಡಿದ್ದು, ಪ್ರಕರಣವನ್ನು ಮೂರನೇ ನ್ಯಾಯಾಧೀಶರಿಗೆ ವಹಿಸಲಾಗಿದ್ದು, ಅವರ ಅಭಿಪ್ರಾಯ ಆಧರಿಸಿ ತೀರ್ಪು ಹೊರಬೀಳಲಿದೆ. 
ಆದರೆ ಇದು ಒಂದು ಗಂಭೀರ ವಿಷಯವಾಗಿರುವುದರಿಂದ ಸುಪ್ರೀಂ ಕೋರ್ಟ್‌ ಇದರ ವಿಚಾರಣೆ ನಡೆಸಬೇಕು ಎಂದು 18 ಶಾಸಕರ ಪರವಾಗಿ ಹಾಜರಿದ್ದ ಹಿರಿಯ ವಕೀಲ ವಿಕಾಸ್‌ ಸಿಂಗ್‌ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

120 ಶಾಸಕರ ಬಲ ಸಿಗುತ್ತಿದ್ದಂತೆ ರಾಜ್ಯಪಾಲರ ಭೇಟಿ: ಸರ್ಕಾರ ರಚನೆಗೆ 'ಸರ್ಕಾರ್' ಹಕ್ಕು ಮಂಡನೆ, ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಮಾಣವಚನ?

ಅಧಿಕಾರ ತಪ್ಪಿಸಿದ ಅಪವಾದ ಬರಬಾರದು, ರಾಷ್ಟ್ರಪತಿ ಆಳ್ವಿಕೆ ಬೇಡ: ನಟ ವಿಜಯ್ ಬೆಂಬಲ ಘೋಷಣೆ ಬಳಿಕ VCK ಮುಖ್ಯಸ್ಥ ಹೇಳಿಕೆ!

ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ, ದೇಶಕ್ಕೆ ರಾಜ್ಯಕ್ಕೆ ಒಳಿತಾಗಲಿ: ವಿಜಯ್ ಬಹುಮತದ ಬೆನ್ನಲ್ಲೇ ಡಿಕೆ ಶಿವಕುಮಾರ್ ಹೇಳಿಕೆ; DCM ಮಾತಿನ ಮರ್ಮವೇನು?

ಹೃದಯವಿದ್ರಾವಕ ಘಟನೆ: ನರ್ಮದಾ ಕಾಲುವೆಗೆ ಬಿದ್ದು 3 ತಿಂಗಳ ಶಿಶು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!

ವಿಜಯ್ -VCK ಡೀಲ್ ಅಂತಿಮ! EPS ನಿಗೂಢ ಪೋಸ್ಟ್ ಅರ್ಥವೇನು?

SCROLL FOR NEXT