ಸಾಂದರ್ಭಿಕ ಚಿತ್ರ 
ದೇಶ

ಇನ್ಮುಂದೆ ತಿಂಗಳಲ್ಲಿ 2 ಬಾರಿ ಎಸಿ ಪ್ರಯಾಣಿಕರ ಬ್ಲ್ಯಾಂಕೆಟ್ ವಾಶ್: ಭಾರತೀಯ ರೈಲ್ವೆ

ಹವಾನಿಯಂತ್ರಿತ ಕೋಚ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ನೀಡುವ ಹೊದಿಕೆ (ಬ್ಲಾಂಕೆಟ್)ಗಳನ್ನು ತಿಂಗಳಲ್ಲಿ...

ನವದೆಹಲಿ: ಹವಾನಿಯಂತ್ರಿತ ಕೋಚ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ನೀಡುವ ಹೊದಿಕೆ (ಬ್ಲಾಂಕೆಟ್)ಗಳನ್ನು ತಿಂಗಳಲ್ಲಿ ಎರಡು ಬಾರಿ ಶುಚಿಗೊಳಿಸಲಾಗುವುದು ಎಂದು ಭಾರತೀಯ ರೈಲ್ವೆ ಮಂಗಳವಾರ ತಿಳಿಸಿದೆ.
ಪ್ರಸ್ತುತ ಎಸಿ ಪ್ರಯಾಣಿಕರ ಬ್ಲಾಂಕೆಟ್ ಗಳನ್ನು ಎರಡು ತಿಂಗಳಿಗೊಮ್ಮೆ ಶುಚಿಗೊಳಿಸಲಾಗುತ್ತಿದ್ದು, ಇನ್ನುಮುಂದೆ ಅದನ್ನು ತಿಂಗಳಿಗೆ ಎರಡು ಬಾರಿ ಶುಚಿಗೊಳಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪದೇಪದೆ ತೊಳೆಯುವುದರಿಂದ ಬ್ಲಾಂಕೆಟ್ ಸಹ ಕಡಿಮೆ ಬಾಳಿಕೆ ಬರುತ್ತದೆ. ಇಷ್ಟುದಿನ ನಾಲ್ಕು ವರ್ಷ ಬರುತ್ತಿದ್ದ ಬ್ಲಾಂಕೆಟ್ ಇನ್ನುಮುಂದೆ ಕೇವಲ ಎರಡು ವರ್ಷ ಬಾಳಿಕೆ ಬರಲಿದೆ. ಇದರಿಂದ ಎಸಿ ಪ್ರಯಾಣಿಕರಿಗೆ ತಗುಲುವ ವೆಚ್ಚಳ ಡಬಲ್ ಆಗಲಿದೆ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ 400 ರುಪಾಯಿ ಬೆಲೆ ಬಾಳುವ ಉಣ್ಣೆಯ ಬ್ಲಾಂಕೆಟ್ ಗಳನ್ನು ನೀಡಲಾಗುತ್ತಿದ್ದು, ಈಗ ಬ್ಲಾಂಕೆಟ್ ಗಳನ್ನು ಬದಲಾಯಿಸಲಾಗುತ್ತಿದ್ದು, ಅದರ ಬೆಲೆಯನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ಬ್ಲಾಂಕೆಟ್ ಬೆಲೆ ಪರಿಷ್ಕರಿಸಿಲ್ಲ. ಈಗ ಮೊದಲಿನ ದರಕ್ಕಿಂತಲೂ ಸ್ವಲ್ಪ ದುಬಾರಿಯಾಗಬಹುದು ಎಂದು ಅವರು ಹೇಳಿದ್ದಾರೆ.
ಭಾರತೀಯ ರೇಲ್ವೆಯ ಎಸಿ ಪ್ರಯಾಣಿಕರಿಗಾಗಿ ನಿತ್ಯ 3.90 ಲಕ್ಷ ಬ್ಲಾಂಕೆಟ್ ಗಳ ಅಗತ್ಯವಿದೆ. ಪ್ರಥಮ ದರ್ಜೆ ಎಸಿ ಪ್ರಯಾಣಿಕರಿಗೆ ನಿತ್ಯ ಶುಚಿಗೊಳಿಸಿದ ಬ್ಲಾಂಕೆಟ್ ನೀಡಲಾಗುತ್ತಿದೆ. ಆದರೆ  ದ್ವಿತೀಯ ಮತ್ತು ತೃತೀಯ ದರ್ಜೆ ಎಸಿ ಪ್ರಯಾಣಿಕರಿಗೆ ಈ ಸೌಲಭ್ಯ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!