ಪ್ರಧಾನಿ ಮೋದಿ (ಸಂಗ್ರಹ ಚಿತ್ರ) 
ದೇಶ

'ಭಾರತದಲ್ಲಿ ತುರ್ತು ಪರಿಸ್ಥಿತಿ ಒಂದು ಕರಾಳ ಅವಧಿ': ಪ್ರಧಾನಿ ಮೋದಿ

ತುರ್ತು ಪರಿಸ್ಥಿತಿಯನ್ನು ಒಂದು ಕರಾಳ ಅವಧಿಯೆಂದು ಭಾರತ ಇಂದಿಗೂ ನೆನೆಯುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ; ತುರ್ತು ಪರಿಸ್ಥಿತಿಯನ್ನು ಒಂದು ಕರಾಳ ಅವಧಿಯೆಂದು ಭಾರತ ಇಂದಿಗೂ ನೆನೆಯುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ. 
1975ರಲ್ಲಿ ಅಂದಿನ ಪ್ರಧಾನಮಂತ್ರಿಯಾಗಿದ್ದ ಇಂದಿರಾ ಗಾಂಧಿಯವರು ದೇಶದಲ್ಲಿ ಆಂತರಿಕ ತುರ್ತುಪರಿಸ್ಥಿತಿ ಘೋಷಣೆಮಾಡಿದ್ದರು. ಆ ಕರಾಳ ಅಧ್ಯಾಕಯಕ್ಕೆ ಜೂನ್25ಕ್ಕೆ 43 ವರ್ಷಗಳಾವೆ. 
ಈ ಹಿನ್ನಲೆಯಲ್ಲಿ ತುರ್ತು ಪರಿಸ್ಥಿತಿಯನ್ನು ನೆನೆದು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದು, 43 ವರ್ಷಗಳ ಹಿಂದೆ ಘೋಷಣೆ ಮಾಡಲಾಗಿದ್ದ ತುರ್ತು ಪರಿಸ್ಥಿತಿಯನ್ನು ಧೈರ್ಯದಿಂದ ವಿರೋಧಿಸಿ ಎಲ್ಲಾ ಮಹಿಳೆ ಹಾಗೂ ಮಹನೀಯರಿಗೆ ನನ್ನ ನಮನಗಳು. ತುರ್ತು ಪರಿಸ್ಥಿತಿಯ ಹೋರಾಟ ಸರ್ವಾಧಿಕಾರ ಮತ್ತು ನಾಗರೀಕ ಸ್ವಾತಂತ್ರ್ಯವನ್ನು ಹತ್ತಿಕ್ಕುವವರ ವಿರುದ್ಧ ಜನಶಕ್ತಿಗೆ ಸಿಕ್ಕ ಗೆಲುವಾಗಿದೆ ಎಂದು ಹೇಳಿದ್ದಾರೆ. 
ಮತ್ತೊಂದು ಟ್ವೀಟ್ ನಲ್ಲಿ, ತುರ್ತು ಪರಿಸ್ಥಿತಿ ಭಾರತದ ಅಧ್ಯಾಯದಲ್ಲಿ ಕರಾಳ ಅವಧಿಯಾಗಿದೆ. ತುರ್ತು ಪರಿಸ್ಥಿತಿಯನ್ನು ಭಾರತೀಯರು ಕರಾಳ ಅವಧಿ ಎಂದೇ ನೆನೆಯುತ್ತಿದ್ದಾರೆ. ಆ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಎಲ್ಲಾ ಸಂಸ್ಥೆಗಳನ್ನೂ ಕೆಳಗಿಳಿಸಲಾಗಿತ್ತು. ಜನರಲ್ಲಿ ಭಯವನ್ನು ಹುಟ್ಟುಹಾಕಲಾಗಿತ್ತು. ಜನರು ಅಷ್ಟೇ ಅಲ್ಲದೆ, ಅವರ ವೈಚಾರಿಕತೆ, ಸ್ವಾತಂತ್ರ್ಯವೆಲ್ಲವನ್ನೂ ಬಂಧಿಸಲಾಗಿತ್ತು. ರಾಜಕೀಯ ಶಕ್ತಿಯ ಮೂಲಕ ಎಲ್ಲವನ್ನೂ ಹತ್ತಿಕ್ಕಲಾಗಿತ್ತು ಎಂದು ತಿಳಿಸಿದ್ದಾರೆ. 
ನಮ್ಮ ಪ್ರಜಾಪ್ರಭುತ್ವ ತತ್ತ್ವಗಳು ಎಂದಿಗೂ ಬಲಾಢ್ಯವಾಗಿರುವಂತೆ ನೋಡಿಕೊಳ್ಳೋಣ. ಚರ್ಚೆ ಮಾಡುವುದು ಪ್ರಶ್ನಿಸುವುದು, ವಿವೇಚಿಸುವುದು ಇವೆಲ್ಲವೂ ಪ್ರಜಾಪ್ರಬುತ್ವಕ್ಕೆ ಅತ್ಯಗತ್ಯವಾಗಿ ಬೇಕಾದ ಸಂಗತಿಗಳಾಗಿವೆ. ಅದಕ್ಕಾಗಿ ನಾವು ಹೆಮ್ಮೆ ಪಡಬೇಕು. ಯಾವುದೇ ಶಕ್ತಿಯೂ ನಮ್ಮ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಹಾಳು ಮಾಡುವುದಕ್ಕೆ ಬಿಡಬಾರದು ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ. 
1975 ಜೂನ್ 25 ರಂದು ದೇಶದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಹೇರಲು ಮುಂದಾಗಿದ್ದ ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರಿಗೆ ಆಗಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಒಪ್ಪಿಗೆ ನೀಡಿದ್ದರು. 
ದೇಶದಲ್ಲಿ ಆಂತರಿಕ ಶಾಂತಿ ಕದಡಲಾಗುತ್ತಿದೆ ಎಂಬ ಕಾರಣ ನೀಡಿದ್ದ ಇಂದಿರಾಗಾಂಧಿಯವರು ಸಂವಿಧಾನದ 352ನೇ ವಿಧಿಯ ಪ್ರಕಾರ ಆಂತರಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದರು. ಆ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಯಾರೇ ಟೀಕಿಸಿದರೂ, ಸರ್ಕಾರದ ವಿರುದ್ಧ ಯಾವುದೇ ಕೆಲಸ ಮಾಡಿದ್ದರೂ ಅವರನ್ನು ಬಂಧನಕ್ಕೊಳಪಡಿಸುವ ಅಧಿಕಾರವಿತ್ತು. ಆದ್ದರಿಂದಲೇ ಈ ಸಂದರ್ಭದಲ್ಲಿ ಲಕ್ಷಾಂತರ ಮಂದಿ ಜೈಲುವಾಸ ಅನುಭವಿಸಿದ್ದರು. ಭಾರತದ ಇತಿಹಾಸದಲ್ಲಿಯೇ ಅತ್ಯಂತ ವಿವಾದಾತ್ಮಕ ಅವಧಿಯಾಗಿ ತುರ್ತು ಪರಿಸ್ಥಿತಿ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT