ಆನಂದ್ ಶರ್ಮಾ 
ದೇಶ

ತುರ್ತು ಪರಿಸ್ಥಿತಿ ಜಾರಿಗೆ ಇಂದಿರಾ ಗಾಂಧಿ ವಿಷಾದ ವ್ಯಕ್ತಪಡಿಸಿದ್ದರು: ಕಾಂಗ್ರೆಸ್

ತುರ್ತು ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿಯ ಟೀಕೆಗಳಿಗೆ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ.ತುರ್ತು ಪರಿಸ್ಥಿತಿ ಅಸಾಮಾನ್ಯವಾಗಿದ್ದು, ಇಂದಿರಾಗಾಂಧಿ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ನವದೆಹಲಿ: ತುರ್ತು ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿಯ ಟೀಕೆಗಳಿಗೆ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ.
ತುರ್ತು ಪರಿಸ್ಥಿತಿಯ 43 ನೇ ವಾರ್ಷಿಕ ದಿನದ ಹಿನ್ನೆಲೆಯಲ್ಲಿ  ಬಿಜೆಪಿ ಸಭೆಯಲ್ಲಿ ಮಾತನಾಡಿದ ನರೇಂದ್ರಮೋದಿ , ಒಂದು ಕುಟುಂಬದ ರಕ್ಷಣೆಗಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ  ಬಳಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕಾದ ಅಗತ್ಯ ಹೆಚ್ಚಾಗಿದೆ ಎಂದು ಹೇಳಿದರು.
ಈ ಸಂಬಂಧ  ಇಂದು ಸರಣಿ ಟ್ವಿಟ್ ಮೂಲಕ ಆನಂದ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.
ಆಕೆಯ ಅವಧಿಯಲ್ಲಿ ಇಂದಿರಾಗಾಂಧಿ ಬಹುದೊಡ್ಡ ನಾಯಕರಾಗಿದ್ದು, ಚುನಾಯಿತ  ಪ್ರಧಾನಿಯಾಗಿದ್ದರು. ಅರುಣ್ ಜೇಟ್ಲಿ ಆಕೆಯನ್ನು ಇಂದಿರಾಗಾಂಧಿಗೆ ಹೋಲಿಕೆ ಮಾಡಿರುವುದು ಅಸಂಬದ್ಧ, ಅತಿರೇಕದಿಂದ ಕೂಡಿದ್ದು, ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.
 ಇಂದಿರಾಗಾಂಧಿ ಚುನಾಯಿತ ಸರ್ಕಾರವನ್ನು ಅಸಂವಿಧಾನಿಕ ಮತ್ತು ಅಪ್ರಜಾಸತಾತ್ಮಕ ವಿಧಾನಗಳಿಂದ ಆಸ್ಥಿರಗೊಳಿಸಬೇಕಾಗಿತ್ತು.  ತುರ್ತು ಪರಿಸ್ಥಿತಿ ಅಸಾಮಾನ್ಯವಾಗಿದ್ದು, ಇಂದಿರಾಗಾಂಧಿ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು ಎಂದು ಅವರು ಹೇಳಿದ್ದಾರೆ.
 ಸರ್ವಾಧಿಕಾರಿಗಳು ಚುನಾವಣೆ ನಡೆಸುವುದಿಲ್ಲ. ಅರುಣ್ ಜೇಟ್ಲಿ ನೆನಪಿನ ಶಕ್ತಿ ಕುಂದಿದೆ. ಇಂದಿರಾಗಾಂಧಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಯನ್ನು ಬಿಜೆಪಿ ನೆನಪು ಮಾಡಿಕೊಳ್ಳಬೇಕಾಗಿದೆ. ಆಕೆ. ಸೋಲು , ಗೆಲುವನ್ನು  ಮಾನವೀಯತೆಯಿಂದ  ಸ್ವೀಕರಿಸುತ್ತಿದ್ದರು ಎಂದು ಆನಂದ್ ಶರ್ಮಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
1980ರ ಸಂದರ್ಭದಲ್ಲಿ ದೇಶದ ಜನತೆ ಇಂದಿರಾಗಾಂಧಿಯನ್ನು ಬಹುಮತದೊಂದಿಗೆ  ಗೆಲುವು ದೊರಕಿಸಿ  ವಿರೋಧಿಗಳ ಹೇಳಿಕೆಯನ್ನು ಕಸದ ತೊಟ್ಟಿಯಲ್ಲಿ ಹಾಕಿದ್ದಾರೆ .ಇಂದಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು  ಪ್ರಧಾನಿ ಅವರ ಸೊಕ್ಕಿನ ಸರ್ಕಾರದ ನಿಯಂತ್ರಣದಲ್ಲಿವೆ ಎಂದು ಆರೋಪಿಸಿದರು.
ಇಂದಿರಾಗಾಂಧಿ ಅವರ ತ್ಯಾಗ, ಧೈರ್ಯ ಮತ್ತು ಕೊಡುಗೆ ಇತಿಹಾಸದಲ್ಲಿ ದಾಖಲಾಗಿದೆ.  ಎರಡನೇ ವಿಶ್ವಯುದ್ಧ ನಂತರ ಬಾಂಗ್ಲಾ ವಿಮೋಚನೆ ಭಾರತೀಯ ಸೇನೆಗೆ  ಸಂದ ಬಹುದೊಡ್ಡ ಜಯ. ಭಾರತ ಪರಮಾಣು ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಶಕ್ತಿ ಪಡೆಯುವಂತಾಯಿತು ಎಂದು ಅವರು ನೆನಪು ಮಾಡಿದ್ದಾರೆ.
ಬಿಜೆಪಿ , ಆರ್ ಎಸ್ ಎಸ್ ಅವರ ಕೊಡುಗೆ ಹಾಗೂ ತ್ಯಾಗವನ್ನು  ಅವಮಾನಿಸಬಾರದು, ಆಕೆಯನ್ನು ದೇಶದ ಜನತೆ ಹಿರೋ ಎಂದೇ ನೆನಪು ಮಾಡಿಕೊಳ್ಳುತ್ತಾರೆ ಎಂದು ಆನಂದ್ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT