ಶುಜಾತ್ ಬುಖಾರಿ 
ದೇಶ

ಬುಖಾರಿ ಹತ್ಯೆ: ವಿವರಣೆ ಕೋರಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಎನ್ಎಚ್ಆರ್ಸಿ ನೋಟೀಸ್

ಶುಜಾತ್ ಬುಖಾರಿ ಹತ್ಯೆ ಸಂಬಂಧ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಜಮ್ಮು ಕಾಶ್ಮೀರದ ಪ್ರಧಾನ ಕಾರ್ಯದರ್ಶಿ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕರಿಗೆ...

ನವದೆಹಲಿ: ಶುಜಾತ್ ಬುಖಾರಿ ಹತ್ಯೆ ಸಂಬಂಧ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಜಮ್ಮು ಕಾಶ್ಮೀರದ ಪ್ರಧಾನ ಕಾರ್ಯದರ್ಶಿ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕರಿಗೆ ನೋಟೀಸ್  ನೀಡಿದೆ.
ಜೂನ್ 14 ರಂದು ಹಿರಿಯ ಪತ್ರಕರ್ತ ಮತ್ತು 'ರೈಸಿಂಗ್ ಕಾಶ್ಮೀರ' ಸಂಪಾದಕ ಬುಖಾರಿ ಶ್ರೀನಗರ ಪ್ರೆಸ್ ಕಾಲೋನಿ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡೇಟಿಗೆ ಬಲಿಯಾಗಿದ್ದರು.
ಬುಖಾರಿ ಹತ್ಯೆ ಸಂಬಂಧ ತ್ವರಿತ ತನಿಖೆ ಅಗತ್ಯವೆಂದು ಕಂಡುಬಂದ ಹಿನ್ನೆಲೆಯಲ್ಲಿ ಆಯೋಗವು ಕಾಶ್ಮೀರದಲ್ಲಿ ಕಳೆದೆರಡು ವರ್ಷಗಳಲ್ಲಿ ಮಾದ್ಯಮದವರ ಮೇಲೆ ನಡೆದ  ದಾಳಿಯ ವಿವರಗಳನ್ನು ಒದಗಿಸಲು ರಾಜ್ಯ ಸರ್ಕಾರವನ್ನು ಕೇಳಿದೆ.
ಅಲ್ಲದೆ ಸಾವನ್ನಪ್ಪಿದ ಪತ್ರಕರ್ತರು, ಮಾದ್ಯಮ ವೃತ್ತಿನಿರತರ ಕುಟುಂಬಗಳಿಗೆ ಒದಗಿಸಿದ ಪರಿಹಾರ ಅಥವಾ ಪುನರ್ವಸತಿ ವಿವರಗಳನ್ನು ಸಹ ನೀಡುವಂತೆ ಆಯೋಗ ತಿಳಿಸಿದೆ. .
ಬುಖಾರಿ ಪೋಲೀಸ್ ರಕ್ಷಣೆಯಲ್ಲಿದ್ದರೂ ಸಹ ಗುಂಡೇಟಿಗೆ ಬಲಿಯಾಗಿದ್ದಾರೆ. ಕಣಿವೆಯಲ್ಲಿ ಪತ್ರಕರ್ತರ ಜೀವ ಸುರಕ್ಷಿತವಾಗಿಲ್ಲ ಎಂದು ಈ ಘಟನೆಯಿಂದ ಸಾಬೀತಾಗಿದೆ.
"ಇದು ಮಾನವ ಹಕ್ಕುಗಳ ಉಲ್ಲಂಘನೆ, ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರಕ್ಕೆ ಬೆದರಿಕೆ ಇದೆ" ಆಯೋಗದ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!