ಕಾಂಗ್ರೆಸ್ ಹಿರಿಯ ನಾಯಕ ಸೈಫುದ್ದೀನ್ ಸೊಜ್ 
ದೇಶ

ಸರ್ದಾರ್ ಪಟೇಲ್ ಕಾಶ್ಮೀರವನ್ನು ಪಾಕ್'ಗೆ ನೀಡಲು ಮುಂದಾಗಿದ್ದರು: ಕಾಂಗ್ರೆಸ್ ನಾಯಕ ಸೈಫುದ್ದೀನ್ ಸೊಜ್

ಭಾರತದ ಸ್ವಾತಂತ್ರ್ಯ ಹೋರಾಟದ ನಾಯಕರಾಗಿದ್ದ ಸರ್ದಾರ್ ವಲ್ಲಭಭಾಯ್ ಪಟೇಲರು ಹೈದರಾಬಾದ್ ಬದಲಿಗೆ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ನೀಡಲು ಮುಂದಾಗಿದ್ದರು ಎಂದು ಕಾಂಗ್ರೆಸ್ ಹಿರಿಯ ನಾಯಕ ಸೈಫುದ್ದೀನ್ ಸೊಜ್ ಅವರು...

ನವದೆಹಲಿ: ಭಾರತದ ಸ್ವಾತಂತ್ರ್ಯ ಹೋರಾಟದ ನಾಯಕರಾಗಿದ್ದ ಸರ್ದಾರ್ ವಲ್ಲಭಭಾಯ್ ಪಟೇಲರು ಹೈದರಾಬಾದ್ ಬದಲಿಗೆ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ನೀಡಲು ಮುಂದಾಗಿದ್ದರು ಎಂದು ಕಾಂಗ್ರೆಸ್ ಹಿರಿಯ ನಾಯಕ ಸೈಫುದ್ದೀನ್ ಸೊಜ್ ಅವರು ಹೇಳಿದ್ದಾರೆ. 
ಕಾಶ್ಮೀರ ಗ್ಲಿಂಪ್ಸಸ್ ಆಫ್ ಹಿಸ್ಟರಿ ಹಾಗೂ ಸ್ಟೋರಿ ಆಫ್ ಸ್ಟ್ರಗಲ್ ಎಂಬ ಪುಸ್ತಕವನ್ನು ಸೈಫುದ್ದೀನ್ ಸೊಜಿಯವರು ಬರೆದಿದ್ದು, ಇಂದು ಪುಸ್ತಕ ಬಿಡುಗಡೆ ಸಮಾರಂಭ ನಡೆದಿದೆ. ಸಮಾರಂಭದಲ್ಲಿ ಮಾತನಾಡಿರುವ ಅವರು, ಸರ್ದಾರ್ ಪಟೇಲರು ವಾಸ್ತವಿಕವಾದಿಯಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದ ನಾಯಕರಾಗಿದ್ದ ಪಟೇಲರು ಅಂದಿನ ಪಾಕಿಸ್ತಾನ ಪ್ರಧಾನಮಂತ್ರಿ ಲಿಖತ್ ಅಲಿ ಖಾನ್ ಅವರಿಗೆ, ಹೈದರಾಬಾದ್ ಬದಲಿಗೆ ಕಾಶ್ಮೀರ ನೀಡುವುದಾಗಿ ತಿಳಿಸಿದ್ದರು ಎಂದು ಹೇಳಿದ್ದಾರೆ. 
ಲಿಖಿತ್ ಖಾನ್ ಯುದ್ಧಕ್ಕೆ ಸಿದ್ಧರಾಗುತ್ತಿದ್ದ ಸಂದರ್ಭದಲ್ಲಿ ಸರ್ದಾರ್ ಪಟೇಲರು ಯುದ್ಧವನ್ನು ಬಯಸಿರಲಿಲ್ಲ. ಯುದ್ಧ ಬಯಸದ ಪಟೇಲರು ಕಾಶ್ಮೀರವನ್ನು ತೆಗೆದುಕೊಳ್ಳಿ, ಹೈದಾಬಾದ್ ಬಗ್ಗೆ ಮಾತನಾಡಿ ಎಂದು ಲಿಖತ್ ಅಲಿ ಖಾನ್ ಅವರಿಗೆ ತಿಳಿಸಿದ್ದರು ಎಂದು ಸೊಜಿ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸೈಫುದ್ದೀನ್ ಸೊಜಿ ಮುಷರಫ್ ಹೇಳಿಕೆಗೆ ಬೆಂಬಲ ನೀಡಿದ್ದರು. "ಪರ್ವೇಜ್ ಮುಷರಫ್ ಕಾಶ್ಮೀರ ವಿಷಯದಲ್ಲಿ ಸರಿಯಾಗಿ ಹೇಳಿದ್ದರು. ಕಾಶ್ಮೀರಿಗಳಿಗೆ ಅವಕಾಶ ನೀಡಿದರೆ ಅವರು ಸ್ವತಂತ್ರರಾಗಿರುವುದಕ್ಕೆ ಬಯಸುತ್ತಾರೆ ಎಂದು ಮುಷರಫ್ ಹೇಳಿದ್ದು ಸರಿಯಾಗಿತ್ತು ಎಂದು ಹೇಳಿದ್ದರು. ಈ ಹೇಳಿಕೆ ಭಾರಿ ವಿರೋಧ ಹಾಗೂ ಟೀಕೆಗಳಿಗೆ ಗುರಿಯಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT