ಸಂಗ್ರಹ ಚಿತ್ರd 
ದೇಶ

ಅಮರನಾಥ ಯಾತ್ರಿಕರು ನಮ್ಮ ಅತಿಥಿಗಳೇ ವಿನಃ ನಮ್ಮ ಗುರಿಯಲ್ಲ; ಹಿಜ್ಬುಲ್ ಕಮಾಂಡರ್

ಅಮರನಾಥ ಯಾತ್ರಿಕರು ನಮ್ಮ ಅತಿಥಿಗಳೇ ವಿನಃ ನಮ್ಮ ಗುರಿಯಲ್ಲ ಎಂದು ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಹೇಳಿದ್ದಾನೆ...

ಶ್ರೀನಗರ; ಅಮರನಾಥ ಯಾತ್ರಿಕರು ನಮ್ಮ ಅತಿಥಿಗಳೇ ವಿನಃ ನಮ್ಮ ಗುರಿಯಲ್ಲ ಎಂದು ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಹೇಳಿದ್ದಾನೆ. 
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಆಗಿರುವ ರಿಯಾಜ್ ನಾಯ್ಕೋ ಎಂಬಾತ ಆಡಿಯೋ ಕ್ಲಿಪ್ ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಈ ಆಡಿಯೋ ಕ್ಲಿಪ್ ಇದೀಗ ವೈರಲ್ ಆಗಿದೆ. 
ಅಮರನಾಥ ಯಾತ್ರೆ ನಮ್ಮ ಗುರಿಯಲ್ಲ. ಯಾತ್ರಿಕರು ತಮ್ಮ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಅಮರಯಾತ್ರೆಗೆ ಬರುತ್ತಾರೆ. ಅವರು ನಮ್ಮ ಅತಿಥಿಗಳೇ ವಿನಃ ನಮ್ಮ ಗುರಿಯಲ್ಲ ಎಂದು ಆಡಿಯೋದಲ್ಲಿ ಉಗ್ರ ಹೇಳಿಕೊಂಡಿದ್ದಾನೆ. 
ಇದೇ ವೇಳೆ ಅಮರನಾಥ ಯಾತ್ರೆ ಮೇಲೆ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂಬ ವರದಿಗಳನ್ನು ತಳ್ಳಿಹಾಕಿರುವ ಉಗ್ರ, ನಾವು ಎಂದಿಗೂ ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಿಲ್ಲ. ಯಾತ್ರಿಕರ ಮೇಲೆ ನಾವು ಯುದ್ಧ ಮಾಡುವುದಿಲ್ಲ. ಬಲವಂತದಿಂದ ನಾವು ಶಸ್ತ್ರಾಸ್ತ್ರಗಳನ್ನು ಹಿಡಿಯುವಂತೆ ಮಾಡಿದವರ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹಕ್ಕು ಮತ್ತು ಸ್ವಾತಂತ್ರ್ಯಕ್ಕಾಗಿ ನಿರಂತರ ಹೋರಾಟ ಮಾಡುತ್ತೇವೆಂದು ತಿಳಿಸಿದ್ದಾನೆ. 
ಆದರೆ, ಉಗ್ರ ಹೇಳಿಕೆ ನೀಡಿರುವ ಈ ಆಡಿಯೋ ಕ್ಲಿಪ್ ಅಸಲಿಯೋ ಅಥವಾ ನಕಲಿಯೋ ಎಂಬುದು ಈವರೆಗೂ ತಿಳಿದುಬಂದಿಲ್ಲ. ಪ್ರಸಕ್ತ ಸಾಲಿನ ಮೊದಲ ಅಮರನಾಥ ಯಾತ್ರಿಕರ ಬ್ಯಾಚ್ ಇಂದು ಬೆಳಿಗ್ಗೆ ಜಮ್ಮುವಿನ ಭಗವತಿ ನಗರದ ಬೇಸ್ ಕ್ಯಾಂಪ್ ನಿಂದ ಹೊರಟಿದ್ದು, ಈ ವೇಳೆ ಉಗ್ರ ನೀಡಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT