ಸಾಂದರ್ಭಿಕ ಚಿತ್ರ 
ದೇಶ

ನಾಪತ್ತೆಯಾಗಿದ್ದ ಚಿದಂಬರಂ ಸಂಬಂಧಿ ಶವವಾಗಿ ಪತ್ತೆ, 3 ಹಂತಕರ ಬಂಧನ

ಕಳೆದ ಸೋಮವಾರ ನಾಪತ್ತೆಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ...

ತಿರುಪುರ: ಕಳೆದ ಸೋಮವಾರ ನಾಪತ್ತೆಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಹತ್ತಿರದ ಸಂಬಂಧಿ, ಉದ್ಯಮಿ ಶಿವಮೂರ್ತಿ(47) ಅವರು ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಮೂವರು ಹಂತಕರನ್ನು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಮೂವರು ಅಪರಿಚಿತ ವ್ಯಕ್ತಿಗಳು ಶಿವಮೂರ್ತಿ ಅವರನ್ನು ಅಪಹರಿಸಿ ಹತ್ಯೆ ಮಾಡಿದ್ದು, ಮೃತದೇಹವನ್ನು ಕೃಷ್ಣಗಿರಿ ಸಮೀಪದ ಟ್ಯಾಂಕ್ ವೊಂದರಲ್ಲಿ ಬಿಸಾಡಿ ಹೋಗಿದ್ದಾರೆ.
ನೈಟ್ ವಿಯರ್ ಎಕ್ಸ್ ಪರ್ಟ್ ಕಂಪನಿ ನಡೆಸುತ್ತಿದ್ದ ಶಿವಮೂರ್ತಿ ಅವರು ಸೋಮವಾರ ತಮ್ಮ ಕಾರಿನಲ್ಲಿ ತಿರುಪುರದಿಂದ ಕೊಯಮತ್ತೂರಿಗೆ ಹೋಗಿದ್ದರು. ಆದರೆ ಮಂಗಳವಾರವೂ ಮನಗೆ ಬರದಿದ್ದರಿಂದ ಮತ್ತು ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ಅನುಮಾನಗೊಂಡ ಕಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಖಚಿತ ಮಾಹಿತಿ ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಶಿವಮೂರ್ತಿಯನ್ನು ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿವಮೂರ್ತಿಗೆ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ವ್ಯಾಪಾರ ಪೈಪೋಟಿ ಹತ್ಯೆಗೆ ಕಾರಣವಾಗಿರಬಹುದು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಯಲ್ಲ: ವಯೋಮಿತಿಯಲ್ಲಿ ಸಡಿಲಿಕೆ, ಪೋಷಕರು ನಿರಾಳ!

IPL 2026: ಬೆಂಗಳೂರಿನಲ್ಲಿ ನಡೆಯುವ ಪಂದ್ಯಕ್ಕೆ ಶಾಸಕರಿಗೆ 4 ವಿಐಪಿ ಟಿಕೆಟ್ ಖಾತ್ರಿಗೆ ಸ್ಪೀಕರ್ ಯುಟಿ ಖಾದರ್ ನಿರ್ದೇಶನ!

Airbnb ಮೂಲಕ ಪೆಂಟ್‌ಹೌಸ್ ಬಾಡಿಗೆ ವಿವಾದ: ಜನರ ಮೇಲೆ ಕಾರು ಹತ್ತಿಸಿದ ತಂದೆ-ಮಗ; ಮಹಿಳಾ ಟೆಕ್ಕಿ ಸಾವು, ಭೀಕರ ದೃಶ್ಯ!

ಮುಡಾ ಪ್ರಕರಣ: ಮತ್ತೆ ಸಿಎಂ ಗೆ ಸಂಕಷ್ಟ, ಬಿ'ರಿಪೋರ್ಟ್ ಸಂಬಂಧ ಸಿದ್ದರಾಮಯ್ಯ, ಪತ್ನಿ ಗೆ ಹೈಕೋರ್ಟ್ ನೋಟಿಸ್ ಜಾರಿ

SCROLL FOR NEXT