ಸಂಗ್ರಹ ಚಿತ್ರ 
ದೇಶ

30 ಸಾವಿರ ರೂ. ಪಿಜ್ಜಾ ತಿನ್ನುವವರಿಗೆ, 12 ಸಾವಿರ ರೂ. ವೇತನದ ಉದ್ಯೋಗ ಕಾಣುವುದಿಲ್ಲ: ರಾಹುಲ್ ಗೆ ಬಿಜೆಪಿ ತಿರುಗೇಟು

ಉದ್ಯೋಗ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಬಿಜೆಪಿ, 30 ಸಾವಿರ ರೂ. ಪಿಜ್ಜಾ ತಿನ್ನುವವರಿಗೆ, 12 ಸಾವಿರ ರೂ. ವೇತನದ ಉದ್ಯೋಗ ಕಾಣುವುದಿಲ್ಲ ಎಂದು ವ್ಯಂಗ್ಯ ಮಾಡಿದೆ.

ನವದೆಹಲಿ: ಉದ್ಯೋಗ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಬಿಜೆಪಿ, 30 ಸಾವಿರ ರೂ. ಪಿಜ್ಜಾ ತಿನ್ನುವವರಿಗೆ, 12 ಸಾವಿರ ರೂ. ವೇತನದ ಉದ್ಯೋಗ ಕಾಣುವುದಿಲ್ಲ ಎಂದು ವ್ಯಂಗ್ಯ ಮಾಡಿದೆ.
ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಉದ್ಯೋಗ ಸೃಷ್ಟಿ ಆಗಿಲ್ಲ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು, ಉದ್ಯೋಗ ಸೃಷ್ಟಿಯಾಗಿಲ್ಲ ಎನ್ನುವವರು  ಬಡಮಹಿಳೆ ಕಲಾವತಿ ಅವರ ಮನೆಗೆ ರಾತ್ರಿ ವೇಳೆ ಬಂದು ನೋಡಲಿ. ಅವರು ಸಂಪಾದನೆ ಹೇಗಿದೆ ಎಂಬುದನ್ನು. ಅದೂ ನಿಜ.. 30 ಸಾವಿರ ರೂ. ಗಳ ಪಿಜ್ಜಾ ತಿನ್ನುವವರಿಗೆ 12 ಸಾವಿರ ರೂ.ಗಳ ಉದ್ಯೋಗ ಎಲ್ಲಿ ಕಾಣುತ್ತದೆ. ಬಡತನವನ್ನೇ ನೋಡದ ಮಂದಿ ಬಡವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಗುಜರಾತ್ ನ ಸಬರಮತಿ ನದಿಯ ಪಾರ್ಕ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಾತನಾಡಿದರು. ಈ ವೇಳೆ ಕೇಂದ್ರ ಸರ್ಕಾರ 10 ಕೋಟಿ ಜನರಿಗೆ ಉದ್ಯೋಗ ಕಲ್ಪಿಸಿದ್ದು, ತಮ್ಮ ಸಚಿವಾಲಯದಿಂದ ಕೋಟ್ಯಂತರ ಜನ ಉದ್ಯೋಗ ಪಡೆದಿದ್ದಾರೆ. ಕೇಂದ್ರ ಸರ್ಕಾರದ ಮುದ್ರಾ ಯೋಜನೆ ಅಡಿಯಲ್ಲಿ 10 ಕೋಟಿ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ. ಮಾಸಿಕ 12 ಸಾವಿರ ರೂ. ನೀಡಬಲ್ಲ ಶೇ.70ರಷ್ಟು ಉದೋಗ ಸೃಷ್ಟಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಕೌಶಲ್ಯ ತರಬೇತಿ ಕುರಿತು ಯೋಜನೆ ಹಮ್ಮಿಕೊಂಡಿದ್ದು, ಯೋಜನೆ ಅಡಿಯಲ್ಲಿ ಕೋಟ್ಯಂತರ ಮಂದಿ ಫಲಾನುಭವಿಗಳಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT