ಪ್ರಕಾಶ್ ರಾಜ್ 
ದೇಶ

ಗೌರಿ ಹಂತಕರಿಂದ ಕೊಲೆಗೆ ಸಂಚು: ನನ್ನ ಧ್ವನಿ ಮತ್ತಷ್ಟು ಗಟ್ಟಿ- ಪ್ರಕಾಶ್ ರಾಜ್

ಹಿರಿಯ ಪತ್ರಕರ್ತೆ, ಗೌರಿ ಲಂಕೇಶ್ ಹಂತಕರಿಂದ ಕೊಲೆಗೆ ಸಂಚು ವರದಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ, ನಿರ್ದೇಶಕ ಪ್ರಕಾಶ್ ರಾಜ್ , ಈ ರೀತಿಯ ಬೆದರಿಕೆಗಳಿಂದ ನನ್ನ ಧ್ವನಿ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.

ಹೈದ್ರಾಬಾದ್: ಹಿರಿಯ ಪತ್ರಕರ್ತೆ, ಗೌರಿ ಲಂಕೇಶ್ ಹಂತಕರಿಂದ ಕೊಲೆಗೆ ಸಂಚು ವರದಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ, ನಿರ್ದೇಶಕ ಪ್ರಕಾಶ್ ರಾಜ್, ಈ ರೀತಿಯ ಬೆದರಿಕೆಗಳಿಂದ ನನ್ನ ಧ್ವನಿ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.
ಕೊಲೆ ಸಂಚು ವರದಿ ಕೇಳಿ ನನ್ನಗೆ ನಗು ಬಂದಿತ್ತು. ಎಲ್ಲರಿಗೂ ಬೆದರಿಕೆ ಅಲ್ಲ. ಎಲ್ಲರಿಗೂ ನಾನು ಬೆದರಿಕೆ ಅಲ್ಲ. ಈ ರೀತಿಯ ಶಕ್ತಿಗಳು ದೇಶದಲ್ಲಿ ದ್ವೇಷವನ್ನು ಹರಡುತ್ತಿವೆ ಎಂದು ಎಎನ್ ಐ ಸುದ್ದಿಸಂಸ್ಥೆಗೆ ಪ್ರಕಾಶ್ ರಾಜ್ ಹೇಳಿದ್ದಾರೆ.
ಯುವಕರಲ್ಲಿ  ತಪ್ಪು ಅಭಿಪ್ರಾಯವನ್ನು ಮೂಡಿಸುವುದರ  ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಯುವಜನಾಂಗದ ಬ್ರೈನ್ ವಾಶ್ ಮಾಡುತ್ತಿರುವುದರ ಬಗ್ಗೆ ನನ್ನಗೆ ಆತಂಕವಿದೆ. ಏಕೆ ಅವರನ್ನು ಬ್ರೈನ್ ವಾಶ್ ಮಾಡಲಾಗುತ್ತಿದೆ. ಅವರು ಎಂತಹ ಸೊಕ್ಕಿನ, ಭಯವಿಲ್ಲದವರು ಎಂಬುದನ್ನು ಈ ಬೆದರಿಕೆಗಳಿಂದಲೇ ತಿಳಿಯಬಹುದಾಗಿದೆ ಎಂದರು.
ಗೌರಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ, ನಟ ಪ್ರಕಾಶ್ ರಾಜ್ ಅವರನ್ನು ಹತ್ಯೆ ಮಾಡಲು ಗೌರಿ ಹಂತಕರ ತಂಡ ಸಂಚು ರೂಪಿಸಿತ್ತು  ಎಂಬ ವರದಿ ಕುರಿತು ಪ್ರಕಾಶ್ ರಾಜ್ ನಿನ್ನೆ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು.
ಮೌನ ಧ್ವನಿಗಳ ವಿವರಣೆ ನೋಡಿ, ನನ್ನ ಧ್ವನಿ ಈಗ  ಮತ್ತಷ್ಟು ಗಟ್ಟಿಯಾಗಿದೆ. ಇಂತಹ ದ್ವೇಷ ರಾಜಕಾರಣದಿಂದ ದೂರ ಆಗಲು ನೀವು ಯೋಚನೆ ಮಾಡುತ್ತಿರಾ ಎಂದು ಪ್ರಕಾಶ್ ರಾಜ್  ಸಂದೇಶದಲ್ಲಿ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT