ರಾಜ್ ಠಾಕ್ರೆ 
ದೇಶ

ತಿನಿಸುಗಳಿಗೆ ದುಬಾರಿ ಬೆಲೆ: ಮಲ್ಟಿಪ್ಲೆಕ್ಸ್ ಪ್ರತಿನಿಧಿ ಮೇಲೆ ಎಂಎನ್ಎಸ್ ಕಾರ್ಯಕರ್ತರಿಂದ ಹಲ್ಲೆ

ಮಾಜಿ ಕಾರ್ಪೋರೇಟರ್ ಸೇರಿದಂತೆ ಎಂಎನ್ಎಸ್ ಕಾರ್ಯಕರ್ತರ ತಂಡ, ಚಿತ್ರಮಂದಿರದ ಒಳಗೆ ಆಹಾರ ಪದಾರ್ಥಗಳಿಗೆ ಹೆಚ್ಚು ಬೆಲೆ...

ಪುಣೆ: ಮಾಜಿ ಕಾರ್ಪೋರೇಟರ್ ಸೇರಿದಂತೆ ಎಂಎನ್ಎಸ್ ಕಾರ್ಯಕರ್ತರ  ತಂಡ, ಚಿತ್ರಮಂದಿರದ ಒಳಗೆ ಆಹಾರ ಪದಾರ್ಥಗಳಿಗೆ ಹೆಚ್ಚು ಬೆಲೆ ವಿಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಲ್ಟಿಪ್ಲೆಕ್ಸ್ ಸಹಾಯಕ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಲ್ಟಿಪ್ಲೆಕ್ಸ್ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ಎಂಎನ್ಎಸ್ ಮಾಜಿ ಕಾರ್ಪೋರೇಟರ್ ಕಿಶೋರ್ ಶಿಂಧೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಚಾತುಶುರಂಗಿ ಪೊಲೀಸ್ ಠಾಣೆಯ ಪೊಲೀಸರು ಹೇಳಿದ್ದಾರೆ.
ನಿನ್ನೆ ಸುಮಾರು ಒಂದು ಡಜನ್ ಎಂಎನ್ಎಸ್ ಕಾರ್ಯಕರ್ತರು ಸೇನಾಪತಿ ಬಾಪತ್ ರಸ್ತೆಯಲ್ಲಿರುವ ಪಿವಿಆರ್ ಐಕಾನ್ ಗೆ ಆಗಮಿಸಿ, ತಿಂಡಿ ತಿನಿಸುಗಳಿಗೆ ದುಬಾರಿ ಬೆಲೆ ವಿಧಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದರು. ಈ ವೇಳೆ ಕೆಲ ಕಾರ್ಯಕರ್ತರು ಮಲ್ಟಿಪ್ಲೆಕ್ಸ್ ನ ಸಹಾಯಕ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೇರೆಯಾಗಿದೆ.
ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಮಾಜಿ ಕಾರ್ಪೋರೇಟರ್ ಶಿಂಧೆ ಹಾಗೂ ಇತರ ಇಬ್ಬರು ಕಾರ್ಯಕರ್ತರು ಮಲ್ಟಿಪ್ಲೆಕ್ಸ್ ಪ್ರತಿನಿಧಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT