ಸಂಗ್ರಹ ಚಿತ್ರ 
ದೇಶ

'ತಾಜ್ ಮಹಲ್ ಕೆಡವೋಣ, ಮೊದಲ ಏಟು ಸಿಎಂ ಯೋಗಿ ಹಾಕಲಿ, ಎರಡನೇ ಏಟು ನಾನು ಹಾಕುತ್ತೇನೆ': ಅಜಂ ಖಾನ್

ತಾಜ್ ಮಹಲ್ ನ ಮೊದಲ ಇಟ್ಟಿಗೆಯನ್ನು ಸಿಎಂ ಯೋಗಿ ಆದಿತ್ಯಾನಾಥ್ ಕಿತ್ತು ಹಾಕಿದರೆ ಎರಡನೇ ಇಟ್ಟಿಗೆಯನ್ನು ನಾನು ಕಿತ್ತು ಹಾಕುತ್ತೇನೆ. ಗುಲಾಮ ಗಿರಿಯ ಗುರುತು ನಮಗೇಕೆ ಬೇಕು ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ವ್ಯಂಗ್ಯ ಮಾಡಿದ್ದಾರೆ.

ಲಖನೌ: ವಿಶ್ವವಿಖ್ಯಾತ ಪ್ರವಾಸಿ ತಾಣ ತಾಜ್ ಮಹಲ್ ಶಿವನ ಮಂದಿರವಾಗಿದ್ದರೆ ಅದನ್ನು ಖಂಡಿತಾ ಕೆಡವಿ ಹಾಕಬೇಕು.. ಹೀಗಾಗಿ ಮೊದಲ ಇಟ್ಟಿಗೆಯನ್ನು ಸಿಎಂ ಯೋಗಿ ಆದಿತ್ಯಾನಾಥ್ ಕಿತ್ತು ಹಾಕಿದರೆ ಎರಡನೇ ಇಟ್ಟಿಗೆಯನ್ನು ನಾನು ಕಿತ್ತು ಹಾಕುತ್ತೇನೆ. ಗುಲಾಮ ಗಿರಿಯ ಗುರುತು ನಮಗೇಕೆ ಬೇಕು ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ವ್ಯಂಗ್ಯ ಮಾಡಿದ್ದಾರೆ.
ಸದಾ ತಮ್ಮ ವಿಚಿತ್ರ ಹೇಳಿಕೆಗಳ ಮೂಲಕ ಸುದ್ದಿಯಾಗುತ್ತಿರುವ ಸಮಾಜವಾದಿ ಮುಖಂಡ ಅಜಂಖಾನ್ ಇದೀಗ ಮತ್ತೊಂದು ಹೇಳಿಕೆ ಮೂಲಕ ಸುದ್ದಿಗೆ ಗ್ರಾಸವಾಗಿದ್ದು, ಪ್ರಪಂಚದ ಅದ್ಬುತಗಳಲ್ಲಿ ಒಂದಾದ ತಾಜ್ ಮಹಲ್ ಅನ್ನು ಕೆಡವಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ತಾಜ್ ಮಹಲ್ ಶಿವನ ಮಂದಿರವಾಗಿತ್ತು ಎಂಬ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರಿಗೆ ತಿರುಗೇಟು ನೀಡಿರುವ ಅಜಂಖಾನ್, 'ತಾಜ್ ಮಹಲ್ ನಿಜಕ್ಕೂ ಶಿವನ ಮಂದಿರವೇ ಆಗಿದ್ದರೆ ಅದನ್ನು ಖಂಡಿತಾ ಕೆಡವಿ ಹಾಕಬೇಕು. ಹೀಗಾಗಿ ಸಿಎಂ ಯೋಗಿ ಆದಿತ್ಯಾನಾಥ್ ಅವರ ವಾದವನ್ನು ನಾನು ಒಪ್ಪುತ್ತೇನೆ. ಅಂತೆಯೇ ಯೋಗಿ ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದ್ದು. ತಾಜ್ ಮಹಲ್ ಕೆಡವಲು ಅವರೊಂದಿಗೆ ಕೈ ಜೋಡಿಸುತ್ತೇವೆ ಎಂದು ಹೇಳಿದ್ದಾರೆ.
'ತಾಜ್ ಮಹಲ್ ಕೆಡವಿ ಹಾಕುವ ಸಿಎಂ ಯೋಗಿ ಆದಿತ್ಯಾನಾಥ್ ಅವರ ಕಾರ್ಯಕ್ಕೆ ನಮ್ಮ ಬೆಂಬಲವಿದೆ. ತಾಜ್ ಮಹಲ್ ನ ಮೊದಲ ಇಟ್ಟಿಗೆಯನ್ನು ಅವರು ಕಿತ್ತುಹಾಕಲಿ, ಎರಡನೇ ಇಟ್ಟಿಗೆಯನ್ನು ನಾನು ಕಿತ್ತು ಹಾಕುತ್ತೇನೆ. ನಾನಷ್ಚೇ ಅಲ್ಲ ನನ್ನ ಸಮುದಾಯ ಸುಮಾರು 20 ಸಾವಿರ ಮಂದಿ ಈ ಕಾರ್ಯದಲ್ಲಿ ಕೈ ಜೋಡಿಸಲಿದ್ದಾರೆ. ಯೋಗಿ ಆದಿತ್ಯಾನಾಥ್ ಅವರು ತಾಜ್ ಮಹಲ್ ಅನ್ನು ಗುಲಾಮಗಿರಿಯ ಸಂಕೇತ ಎಂದು ಹೇಳುತ್ತಿದ್ದಾರೆ. ಗುಲಾಮಗಿರಿಯ ಸಂಕೇತ ನಮಗೇಕೆ ಬೇಕು. ಅದನ್ನು ಕೂಡಲೇ ಕೆಡವಿ ಹಾಕೋಣ ಎಂದು ಅಜಂಖಾನ್ ವ್ಯಂಗ್ಯವಾಡಿದ್ದಾರೆ.
ಅಜಂಖಾನ್ ಅವರ ಈ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪರ-ವಿರೋಧ ಚರ್ಚೆಗಳಾಗುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT