ದೇಶ

ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲು ಬಿಜೆಪಿ ನಾಯಕರನ್ನು ಭೇಟಿ ಮಾಡಲಿರುವ ನಿತೀಶ್ ಕುಮಾರ್

Srinivas Rao BV
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟದ ಸ್ಥಾನಗಳ ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. 
ಜುಲೈನಲ್ಲಿ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಿತೀಶ್ ಕುಮಾರ್ ಮಾತುಕತೆ ನಡೆಸಲಿದ್ದಾರೆ.  ಆದರೆ ಲೋಕಸಭಾ ಚುನಾವಣೆಯಲ್ಲಿ ಸ್ಥಾನಗಳ ಹಂಚಿಕೆಗೆ ಸಂಬಂಧಿಸಿದಂತೆ ಈಗಲೇ ತೀರ್ಮಾನ ಮಾಡುವುದು ಸರಿಯಲ್ಲ ಎಂಬುದು ಬಿಜೆಪಿ ನಾಯಕರ ಅಭಿಪ್ರಾಯ ಎಂದು ಹೇಳಲಾಗುತ್ತಿದೆ. 
ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿಗೂ ಮುನ್ನ ಜು.6 ರಂದು ನಿತೀಶ್ ಕುಮಾರ್ ನವದೆಹಲಿಗೆ ತೆರಳುವ ಸಾಧ್ಯತೆ ಇದ್ದು, ಪ್ರಧಾನಿಯನ್ನೂ ಭೇಟಿ ಮಾಡಿ 2019 ರ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚಿಸಲಿದ್ದಾರೆ.  ಇದೇ ವೇಳೆ ಜುಲೈ ತಿಂಗಳಲ್ಲೇ ಅಮಿತ್ ಶಾ ಸಹ ಪಾಟ್ನಾಗೆ ಭೇಟಿ ನೀಡಲಿದ್ದಾರೆ.
SCROLL FOR NEXT