ಸಂಗ್ರಹ ಚಿತ್ರ 
ದೇಶ

ಬುಡಕಟ್ಟು ಕುಟುಂಬಕ್ಕೆ ಬೆದರಿಕೆ; ಟಿಎಂಸಿ ಆರೋಪ ತಳ್ಳಿ ಹಾಕಿದ ಬಿಜೆಪಿ

ಬುಡಕಟ್ಟು ಸಮುದಾಯದ ಮನೆಗೆ ತೆರಳಿದ್ದ ವೇಳೆ ಅಮಿತ್ ಶಾ ಸಮ್ಮುಖದಲ್ಲೇ ಬಿಜೆಪಿ ಮುಖಂಡರು ಪಕ್ಷ ಸೇರುವಂತೆ ಬೆದರಿಕೆ ಹಾಕಿದ್ದರು ಎಂಬ ಟಿಎಂಸಿ ಮುಖಂಡ ಮದನ್ ಮಿತ್ರಾ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ.

ಕೋಲ್ಕತಾ: ಬುಡಕಟ್ಟು ಸಮುದಾಯದ ಮನೆಗೆ ತೆರಳಿದ್ದ ವೇಳೆ ಅಮಿತ್ ಶಾ ಸಮ್ಮುಖದಲ್ಲೇ ಬಿಜೆಪಿ ಮುಖಂಡರು ಪಕ್ಷ ಸೇರುವಂತೆ ಬೆದರಿಕೆ ಹಾಕಿದ್ದರು ಎಂಬ ಟಿಎಂಸಿ ಮುಖಂಡ ಮದನ್ ಮಿತ್ರಾ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ.
ಅತ್ತ ಮದನ್ ಮಿತ್ರಾ ಅವರು ಸುದ್ದಿಗೋಷ್ಠಿ ವಿಚಾರ ಪಶ್ಟಿಮ ಬಂಗಾಳದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾದಂತೆ ಇತ್ತ ಮದನ್ ಮಿತ್ರಾ ಆರೋಪಗಳನ್ನು ಬಿಜೆಪಿ ಸಾರಾಸಗಟಾಗಿ ತಳ್ಳಿ ಹಾಕಿದೆ. ಅಲ್ಲದೆ ಬುಡಕಟ್ಟು ಕುಟುಂಬದ ಆರೋಪಗಳ ಹಿಂದೆ ಟಿಎಂಸಿ ಷಡ್ಯಂತ್ರವಿದ್ದು, ಬುಡಕಟ್ಟು ಕುಟುಂಬವನ್ನು ತನ್ನ ರಾಜಕೀಯ ಏಳಿಗೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ತಾನು ಮಾಡುತ್ತಿರುವ ಕೆಲಸವನ್ನು ಬಿಜೆಪಿ ಮೇಲೆ ಹಾಕುತ್ತಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ನೀಚ ರಾಜಕೀಯಕ್ಕೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ಹೇಳಿದ್ದಾರೆ.
ಇತ್ತೀಚೆಗೆಷ್ಟೇ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದರು. ಈ ವೇಳೆ ಪುರುಲಿಯಾ ಜಿಲ್ಲೆಯ ಲಗ್ಡಾ ಗ್ರಾಮದ ಬುಡಕಟ್ಟು ಸಮುದಾಯದ ಕುಟುಂಬದ ಮನೆಗೆ ತೆರಳಿದ್ದ ಶಾ ಉಪಾಹಾರ ಸೇವಿಸಿದ್ದರು. ಈ ಘಟನೆ ನಡೆದ ಬೆನ್ನಲ್ಲೇ ನಿನ್ನೆ ಇದೇ ಕುಟುಂಬ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿತ್ತು. ಅಲ್ಲದೆ ಬಿಜೆಪಿ ಮುಖಂಡರು ಪಕ್ಷ ಸೇರುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಳಿಗಾಲದ ಅಧಿವೇಶನ ಮುಕ್ತಾಯ: 2026-27ನೇ ಸಾಲಿನ ರಾಜ್ಯ ಬಜೆಟ್'ಗೆ ಸಿದ್ದರಾಮಯ್ಯ ಸಿದ್ಧತೆ: ಈ ಬಾರಿ ಬಜೆಟ್ ಗಾತ್ರ, ಸಾಲ ಪ್ರಮಾಣ ಹೆಚ್ಚಳ ಸಾಧ್ಯತೆ..!

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ

ಒಳನುಸುಳುವವರನ್ನು ಹೊರಗಿಡಲು SIR; ಆದ್ರೆ ದಶಕಗಳಿಂದ ಕಾಂಗ್ರೆಸ್ ಅವರನ್ನು ರಕ್ಷಿಸಿತ್ತು: ಪ್ರಧಾನಿ ಮೋದಿ

BMC election: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಉದ್ಧವ್ ಠಾಕ್ರೆ, ಶರದ್ ಪವಾರ್ ಜತೆ ಮೈತ್ರಿ ಇಲ್ಲ

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!

SCROLL FOR NEXT