ಕಣ್ಣೀರಿಡುತ್ತಿರುವ ದೇವತೆ: ವಿಸ್ಮಯಕಾರಿ ಘಟನೆ ನೋಡಲು ನೆರೆದ ಜನಸ್ತೋಮ 
ದೇಶ

ಕಣ್ಣೀರಿಡುತ್ತಿರುವ ದೇವತೆ: ವಿಸ್ಮಯಕಾರಿ ಘಟನೆ ನೋಡಲು ನೆರೆದ ಜನಸ್ತೋಮ

ದೇವತೆಯ ವಿಗ್ರಹದಿಂದ ಕಣ್ಣೀರು ಸುರಿಯುತ್ತಿದ್ದು, ಈ ವಿಸ್ಮಯಕಾರಿ ಘಟನೆಯನ್ನು ನೋಡಲು ಜನಸ್ತೋಮ ನೆರೆದಿರುವ ಘಟನೆ ತೆಲಂಗಾಣದ ಸಿದ್ದಿಪೇಟ್ ನ ಚಿನ್ನಕೊಡೂರು ಗ್ರಾಮದಲ್ಲಿ ನಡೆದಿದೆ.

ಸಿದ್ದಿಪೇಟ್: ದೇವತೆಯ ವಿಗ್ರಹದಿಂದ ಕಣ್ಣೀರು ಸುರಿಯುತ್ತಿದ್ದು, ಈ ವಿಸ್ಮಯಕಾರಿ ಘಟನೆಯನ್ನು ನೋಡಲು ಜನಸ್ತೋಮ ನೆರೆದಿರುವ ಘಟನೆ ತೆಲಂಗಾಣದ ಸಿದ್ದಿಪೇಟ್ ನ ಚಿನ್ನಕೊಡೂರು ಗ್ರಾಮದಲ್ಲಿ ನಡೆದಿದೆ. 
ಸದಾ ಮಂದಗತಿಯಲ್ಲಿ ಸಾಗುವ ಚಿನ್ನಕೊಡೂರು ಗ್ರಾಮದಲ್ಲಿನ ರೇಣುಕಾ ಎಲ್ಲಮ್ಮ ದೇವಾಲಯದಲ್ಲಿರುವ ದೇವತೆಯ ವಿಗ್ರಹದಿಂದ ಕಣ್ಣೀರು ಸುರಿಯುತ್ತಿದ್ದು, ಈ ವಿಸ್ಮಯವನ್ನು ನೋಡಲು ಪಕ್ಕದ ಗ್ರಾಮದವರೂ ಧಾವಿಸುತ್ತಿದ್ದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ದೇವಿಯ ಕಣ್ಣೀರು ರಂಗಾ ನಾಯ್ಕ್ ಸಾಗರ್ ಯೋಜನೆಯಲ್ಲಿ ತಮ್ಮ ಗ್ರಾಮ ಮುಳುಗಡೆಯಾಗಬಹುದೆಂಬ ಸೂಚನೆಯಾಗಿದ್ದಿರಬಹುದು ಎನ್ನುತ್ತಾರೆ ಇಲ್ಲಿನ ಗ್ರಾಮಸ್ಥರು. 
"ದೇವಿಯ ವಿಗ್ರಹದಿಂದ ಕಣ್ಣೀರು ಸುರಿಯುತ್ತಿರುವುದು ನಿಜ, ದೇವಿಯನ್ನು ಸಂತುಷ್ಟಗೊಳಿಸಲು ದೇವಾಲಯ ನಿರ್ಮಿಸಿಸಲು ತೀರ್ಮಾನಿಸಿ, ಆಶೀರ್ವಾದ ಬೇಡಿದ್ದೇವೆ" ಎಂದು ಗ್ರಾಮಸ್ಥರಾಗಿರುವ ಚಂದ್ರಮೌಳಿ ಹೇಳಿದ್ದಾರೆ. ದೇವಾಲಯದಲ್ಲಿ ಪೂಜೆ ಸಲ್ಲಿಸುವ ಅರ್ಚಕಿ ಅಂಜವ್ವ ಈ ಘಟನೆಯನ್ನು ಮೊದಲು ಗಮನಿಸಿದ್ದಾರೆ. ಎಂದಿನಂತೆ ಪ್ರತಿ ನಿತ್ಯ ಪೂಜೆ ಸಲ್ಲಿಸಲು ಬಂದಿದ್ದಾಗ ವಿಗ್ರಹದಲ್ಲಿ ಕಣ್ಣೀರು ಕಾಣಿಸಿಕೊಂಡಿತ್ತು.  ಸುಮಾರು 15 ನಿಮಿಷಗಳ ಕಾಲ ಇದೇ ರೀತಿ ಮುಂದುವರೆದಿತ್ತು ಎಂದು ಅಂಜವ್ವ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ