ಸಂಗ್ರಹ ಚಿತ್ರ 
ದೇಶ

ಸ್ವಿಸ್ ಬ್ಯಾಂಕ್'ಗಳಲ್ಲಿ ಭಾರತೀಯರ ಠೇವಣಿ ಪ್ರಮಾಣ ಏರಿಕೆ: ಪ್ರಧಾನಿ ಮೋದಿಗೆ ರಾಹುಲ್ ತಿರುಗೇಟು

ಕಪ್ಪುಕುಳಗಳ ಸ್ವರ್ಗವೆಂದೇ ಬಿಂಬಿತವಾಗಿರುವ ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರು ಹೊಂದಿರುವ ಹಣದ ಪ್ರಮಾಣ 2017ನೇ ಸಾಲಿನಲ್ಲಿ ಶೇ.50ರಷ್ಟು ಹೆಚ್ಚಾಗಿ ರೂ.7000 ಕೋಟಿ ತಲುಪಿದೆ ಎಂದ ವರದಿಯನ್ನಿಟ್ಟುಕೊಂಡು...

ನವದೆಹಲಿ: ಕಪ್ಪುಕುಳಗಳ ಸ್ವರ್ಗವೆಂದೇ ಬಿಂಬಿತವಾಗಿರುವ ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರು ಹೊಂದಿರುವ ಹಣದ ಪ್ರಮಾಣ 2017ನೇ ಸಾಲಿನಲ್ಲಿ ಶೇ.50ರಷ್ಟು ಹೆಚ್ಚಾಗಿ ರೂ.7000 ಕೋಟಿ ತಲುಪಿದೆ ಎಂದ ವರದಿಯನ್ನಿಟ್ಟುಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಚಾಟಿ ಬೀಸಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, 2014ರಲ್ಲಿ ಮೋದಿ ಹೇಳಿದ್ದರು; ಸ್ವಿಸ್ ಬ್ಯಾಂಕುಗಳಿಂದ ಎಲ್ಲಾ ಕಪ್ಪು ಹಣವನ್ನು ತಂದು ಪ್ರತೀಯೊಬ್ಬ ಭಾರತೀಯ ಖಾತೆಗೆ ರೂ.15 ಲಕ್ಷ ಹಾಕುವೆ ಎಂದು. 2016ರಲ್ಲಿ ಹೇಳಿದ್ದರು; ಕಪ್ಪು ಹಣ ವ್ಯವಸ್ಥೆಯನ್ನು ಅಪನಗದೀಕರಣ ನಿವಾರಿಸಲಿದೆ ಎಂದು. 2018ರಲ್ಲಿ ಹೇಳುತ್ತಿದ್ದಾರೆ; ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯ ಠೇವಣಿ ಶೇ.50ರಷ್ಟು ಏರಿಕೆಯಾಗಿದೆ ಎಂದು. ಅದು ಸಂಪೂರ್ಣ ಬಿಳಿ ಹಣ. ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣವೇ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಇದರಂತೆ ಕಾಂಗ್ರೆಸ್ ಕೂಡ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದು, ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯ ಠೇವಣಿ ಕುಸಿತವಾಗಿತ್ತು. ಮೋದಿ ಅವರ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. 
ಶೇ.50ರಷ್ಟು ಏರಿಕೆಯಾಗಿರುವುದು 2004ರ ನಂತರ ಇದೇ ಮೊದಲು. ವಿದೇಶದಲ್ಲಿ ರೂ.80 ಲಕ್ಷ ಕೋಟಿ ಕಪ್ಪು ಹಣ ತಂದು ಪ್ರತೀಯೊಬ್ಬ ಭಾರತೀಯರ ಬ್ಯಾಂಕ್ ಖಾತೆಗೆ ರೂ.15 ಲಕ್ಷ ಹಾಕುವ ಭರವಸೆ ಏನಾಯಿತು ಎಂದು ಕಾಂಗ್ರೆಸ್ ವಕ್ತಾರ ಆರ್'ಪಿಎನ್ ಸಿಂಗ್ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT