ಸುಷ್ಮಾ ಸ್ವರಾಜ್ 
ದೇಶ

ಮುಸ್ಲಿಂರ ಓಲೈಕೆ ಆರೋಪ, ಮತ್ತೆ ಟ್ರೋಲಾದ ಸುಷ್ಮಾ ಸ್ವರಾಜ್

ನವದಹೆಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟರ್ ನಲ್ಲಿ ಮತ್ತೆ ಟ್ರೋಲ್ ಗೆ ಆಹಾರವಾಗಿದ್ದಾರೆ. ಮುಸ್ಲಿಂರ ಓಲೈಕೆ ಆರೋಪಕ್ಕೆ ಗುರಿಯಾಗಿದ್ದಾರೆ.

ನವದಹೆಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟರ್ ನಲ್ಲಿ ಮತ್ತೆ ಟ್ರೋಲ್ ಗೆ ಆಹಾರವಾಗಿದ್ದಾರೆ. ಮುಸ್ಲಿಂರ ಓಲೈಕೆ  ಆರೋಪಕ್ಕೆ ಗುರಿಯಾಗಿದ್ದಾರೆ.  ಮುಸ್ಲಿಂ ಸಮುದಾಯವನ್ನು ತೃಪ್ತಿಪಡಿಸುವ ಕೆಲಸವನ್ನು ನಿಲ್ಲಿಸುವಂತೆ ಆಕೆಗೆ ಬುದ್ದಿವಾದ ಹೇಳಿ ಎಂದು  ಆಕೆಯ ಪತಿ ಸ್ವರಾಜ್ ಕೌಶಲ್ ಅವರಿಗೆ ಟ್ವಿಟ್ ಸಲಹೆ ನೀಡಲಾಗಿದೆ.
ಹಿಂದೂ ಮುಸ್ಲಿಂ ದಂಪತಿಗೆ ಅವಮಾನ ಮಾಡಿದ್ದ  ಲಖನೌ  ಪಾಸ್ ಪೋರ್ಟ್ ಸೇವಾ ಕೇಂದ್ರದ ಅಧಿಕಾರಿಯನ್ನು ವರ್ಗಾವಣೆ ಮಾಡಿ ದಂಪತಿಗೆ ನೆರವಾದುದ್ದಕ್ಕೆ ಸುಷ್ಮಾ ಸ್ವರಾಜ್ ಮೇಲೆ ಸೈಬರ್ ದಾಳಿ ನಡೆಯುತ್ತಿದೆ. ಈ ವಿಷಯವನ್ನು ಸಚಿವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
 ಜೂನ್ 17 ರಿಂದ 23ರವರೆಗೆ ನಾನು ದೇಶದಲ್ಲಿರಲಿಲ್ಲ. ನಾನು ಗೈರಾಗಿದ್ದಾಗ ಏನಾಗಿದೆಯೋ ನನಗೆ ತಿಳಿದಿಲ್ಲ. ಆದಾಗ್ಯೂ, ಕೆಲವು ಟ್ವೀಟ್ ಗಳ ಮೂಲಕ ನನ್ನನ್ನು ಗೌರವಿಸಲಾಗಿದೆ. ಅವುಗಳನ್ನು ನಿಮ್ಮ ಜತೆ ಹಂಚಿಕೊಳ್ಳುತ್ತೇನೆ. ಅದಕ್ಕಾಗಿ ಅವುಗಳನ್ನು ಲೈಕ್ ಮಾಡಿದ್ದೇನೆ ಎಂದು ನೋವಿನಿಂದ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ದಂಪತಿ ಹೇಳುವ ಪ್ರಕಾರ  ಪಾಸ್ ಪೋರ್ಟ್ ಸೇವಾ ಕೇಂದ್ರದ  ಅಧಿಕಾರಿ ಮಿಶ್ರಾ ,  ಮುಸ್ಲಿಂ  ಪತಿಯನ್ನು  ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಹಾಗೂ ಹಿಂದೂ ಯುವತಿ  ಮುಸ್ಲಿಂರನ್ನು ವಿವಾಹವಾಗದ್ದಕ್ಕೆ ನಿಂದಿಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು.
ಈ ವಿವಾದದಲ್ಲಿ  ವಿದೇಶಾಂಗ ಸಚಿವಾಲಯ  ಮಿಶ್ರಾ ವಿರುದ್ಧ ಕ್ರಮ ಕೈಗೊಂಡಿದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ಸುಷ್ಮಾ ಸ್ವರಾಜ್ ತೀವ್ರ ಟೀಕೆಗೆ ಗುರಿಯಾಗಿದ್ದರು. ವಿದೇಶಾಂಗ ಸಚಿವರನ್ನು ನಿಂದಿಸಿರುವಂತಹ ಕೆಲ ಟ್ವಿಟ್ ಗಳನ್ನು ಸಚಿವರು ಮರು ಟ್ವೀಟ್ ಮಾಡಿದ್ದಾರೆ.
 ಇಂತಹ ಟ್ರೋಲ್ ಗಳ  ವಿರುದ್ದ ಕ್ರಮ ಕೈಗೊಳ್ಳಲು ವಿದೇಶಾಂಗ ಸಚಿವಾಲಯ  ಚಿಂತನೆ ನಡೆಸುತ್ತಿದೆ.  ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂತಹ ದೋಷಪೂರಿತ ಟ್ವಿಟ್ ಗಳ ಬಗ್ಗೆ ಪ್ರತಿಕ್ರಿಯಿಸಿದೆ.
ಸಚಿವರು ತಮ್ಮದೇ ರೀತಿಯಲ್ಲಿ ಸೂಕ್ತವಾದ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಹೆಚ್ಚಿಗೆ ಸೇರಿಸಲು ನಾನೂ ಯೋಚಿಸಿಲ್ಲ ಎಂದು ವಿದೇಶಾಂಗ ವ್ಯವಹಾರಗಳ  ವಕ್ತಾರ ರವೀಶ್ ಕುಮಾರ್  ಹೇಳಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT