ಲಕ್ಷದ್ವೀಪ: ಬಾರತೀಯ ಪಡೆಗಳಿಂದ ಗಾಯಗೊಂಡಿದ್ದ ಶ್ರೀಲಂಕಾ ಮೀನುಗಾರರ ರಕ್ಷಣೆ 
ದೇಶ

ಲಕ್ಷದ್ವೀಪ: ಬಾರತೀಯ ಪಡೆಗಳಿಂದ ಗಾಯಗೊಂಡಿದ್ದ ಶ್ರೀಲಂಕಾ ಮೀನುಗಾರರ ರಕ್ಷಣೆ

ಮೀನುಗಾರಿಕೆ ಹಡಗಿನಲ್ಲಿ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿದ್ದ ಶ್ರೀಲಂಕಾ ಮೂಲದ ಮೀನುಗಾರರನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ಪಾರು ಮಾಡಿದೆ ಎಂದು ಪಿಟಿಐ ವರದಿ ಮಾಡಿದೆ.

ನವದೆಹಲಿ: ಮೀನುಗಾರಿಕೆ ಹಡಗಿನಲ್ಲಿ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿದ್ದ ಶ್ರೀಲಂಕಾ ಮೂಲದ ಮೀನುಗಾರರನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ಪಾರು ಮಾಡಿದೆ ಎಂದು ಪಿಟಿಐ ವರದಿ ಮಾಡಿದೆ.
ಕೊಲಂಬೋದ ಸಾಗರ ರಕ್ಷಣೆ  ಕೇಂದ್ರ ಲಕ್ಷದ್ವೀಪ ಬಳಿಯಲ್ಲಿ ಹಡಗಿನಲ್ಲಿದ್ದು ಅಪಾಯಕ್ಕೆ ಸಿಲುಕಿದ್ದ  ತನ್ನ ಮೀನುಗಾರರನ್ನು ರಕ್ಷಿಸುವಂತೆ ಭಾರತೀಯ ಕರಾವಳಿ ರಕ್ಷಣಾ ಪಡೆಗಳಿಗೆ ಮನವಿ ಸಲ್ಲಿಸಿತ್ತು. ಐದು ಸಿಬ್ಬಂದಿಗಳನ್ನು ಹೊಂದಿದ್ದ ಈ ಹಡಗು ಫೆ.14ರಂದು ದ್ವೀಪರಾಷ್ಟ್ರದಿಂದ ಹೊರಟಿತ್ತು.
ಹಡಗಿನ ಓರ್ವ ಸಿಬ್ಬಂದಿಯಾದ ಎಂಪಿ ಸುನೀಲ್ ಶಾಂತಾ(47) ಅವರ ಕತ್ತಿನ ಭಾಗಕ್ಕೆ ತೀವ್ರ ಪೆಟ್ಟಾಗಿದೆ ಎಂದು ಹೇಳಿಕೆ ತಿಳಿಸಿದ್ದು  ಸಧ್ಯ ಇದೀಗ ಭಾರತೀಯ ರಕ್ಷಣಾ ಪಡೆ ಹಡಗಿನಲ್ಲಿ ಗಾಯಗೊಂಡಿರುವ ಮೀನುಗಾಗ್ರರಿಗೆ ಪ್ರಾಥಮಿಕ ಅಗತ್ಯ ಚಿಕಿತ್ಸೆಗಳನ್ನು ಒದಗಿಸುತ್ತಿದೆ.
ಮೀನುಗಾರರ ಆರೋಗ್ಯ ಸ್ಥಿರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಚ್ಚಿನ್ ಗೆ ಕರೆದೊಯ್ಯಲಾಗುತ್ತದೆ. ಮಾ.3ಕ್ಕೆ ಹಡಗು ಕೊಚ್ಚಿನ್ ತಲುಪಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT