ಎಸ್.ಎಸ್.ಸಿ. ಅಭ್ಯರ್ಥಿಗಳ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯಿಂದ ಪ್ರತಿಭಟನಾಕಾರರ ಭೇತಿ 
ದೇಶ

ಎಸ್.ಎಸ್.ಸಿ. ಅಭ್ಯರ್ಥಿಗಳ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯಿಂದ ಪ್ರತಿಭಟನಾಕಾರರ ಭೇಟಿ

ಭ್ರಷ್ಟಾಚಾರ ವಿರೋಧಿ, ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಭಾನುವಾರ ಸಿಬ್ಬಂದಿ ಆಯ್ಕೆ ಆಯೋಗ ( (ಎಸ್ .ಎಸ್ . ಸಿ) ಆಯುಕ್ತರನ್ನು ಭೇಟಿಯಾಗಿದ್ದಾರೆ.

ನವದೆಹಲಿ: ಭ್ರಷ್ಠಾಚಾರ ವಿರೋಧಿ, ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಭಾನುವಾರ ಸಿಬ್ಬಂದಿ ಆಯ್ಕೆ ಆಯೋಗ  (ಎಸ್ .ಎಸ್ . ಸಿ) ಆಯುಕ್ತರನ್ನು ಭೇಟಿಯಾಗಿದ್ದಾರೆ.
ಪ್ರತಿಭಟನಾಕಾರರನ್ನು ಭೇಟಿಯಾದ ಹಜಾರೆ ಅಹಿಂಸೆಯ ಹಾದಿಯಲ್ಲಿ ಪ್ರತಿಭಟನೆ ನಡೆಸುವಂತೆ ಹೇಳಿದರಲ್ಲದೆ ಸರ್ಕಾರ ಇವರ ಹೋರಾಟದತ್ತ ಗಮನ ನೀಡಿ ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದ್ಡಾರೆ.
"ಅನ್ಯಾಯ ಹಾಗೂ ಕಿರುಕುಳವನ್ನು ಎದುರಿಸಿ ಹೋರಾಡುವಾಗ ಅಹಿಂಸೆಯ ಹಾದಿಯಲ್ಲಿ ನಡೆಯುವುದು ಬಹಳ ಮುಖ್ಯ. ಇದು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಸರ್ಕಾರ ತೀರ್ಮಾನ ಕೈಗೊಳ್ಳುವವರೆಗೆ ನಾವು ಕಾಯಬೇಕಿದೆ. ನಂತರ ನಾವೇನು ಮಾಡಬೇಕೆನ್ನುವುದನ್ನು ನಿರ್ಧರಿಸೋಣ. ಈ ಮಧ್ಯೆ, ನಿಮ್ಮ ಹೋರಾಟ ಹಿಂಸಾ ಸ್ವರೂಪ ಪಡೆದುಕೊಳ್ಳಬಾರದೆಂದು ನಾನು ಮನವಿ ಮಾಡುತ್ತೇನೆ." ಹಜಾರೆ ಹೇಳಿದ್ದಾರೆ.
ಫೆ.27ರಿಂದ ಈಚೆಗೆ ದೆಹಲಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಎಸ್.ಎಸ್.ಸಿ.ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಯೋಗದ  ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು  ನಡೆದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.
ಆದರೆ ಫೆ.24ರಂದು ಎಸ್.ಎಸ್.ಸಿ. ಹೊರಡಿಸಿದ್ದ ನೋಟೀಸ್ ನಲ್ಲಿ ಫೆ.21 ರಂದು ಆಯೋಗ ನಡೆಸಿದ್ದ ಪರೀಕ್ಷೆಯು ತಾಂತ್ರಿಕ ಕಾರಣಗಳಿಂದ ವಿಫಲವಾಗಿದೆ. ಇದಕ್ಕಾಗಿ ಮಾ.9ರಂದು ಪುನಃಅ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನಗಳ ವಿಧಾನಮಂಡಲ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ

'ಲಾಲ್‌ಬಾಗ್ ಉಳಿಸಿ..': ಕೊನೆಗೂ ಹೋರಾಟಕ್ಕೆ ಮಣಿದ ಸರ್ಕಾರ; ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಸ್; BJP ಸ್ವಾಗತ; Video

ಪಾರ್ಕ್ ಬಿಲ್‌ಗೆ ಸದ್ಯಕ್ಕೆ ಬ್ರೇಕ್; ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಮಂಡನೆ: ಡಿಸಿಎಂ ಜಿ. ಪರಮೇಶ್ವರ; Video

Video: ಉರಿಯುತ್ತಿದ್ದ ಚಿತೆಯಿಂದ ಮಾಂಸ ತೆಗೆದು ತಿಂದ 'ಅಘೋರಿ'; ಉಜ್ಜೈನ್ ಪೊಲೀಸರಿಂದ ಬಂಧನ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ