ದೇಶ

2019 ರ ಸಾರ್ವತ್ರಿಕ ಚುನಾವಣೆಗೆ ತೃತೀಯ ರಂಗಕ್ಕೆ ಒವೈಸಿ ಕರೆ

Srinivas Rao BV
ಹೈದರಾಬಾದ್: 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ತೃತೀಯ ರಂಗ ಸಕ್ರಿಯಗೊಳ್ಳಬೇಕೆಂದು ಎಂಐಎಂ  ಪಕ್ಷದ ಮುಖಂಡ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. 
ಸಮಾನ ಮನಸ್ಕ ಪಕ್ಷಗಳ ಒಕ್ಕೂಟವನ್ನು ರಚನೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆ ಸಂಪರ್ಕದಲ್ಲಿರುವುದಾಗಿ  ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಹೇಳಿಕೆ ನೀಡಿದ ಬೆನ್ನಲ್ಲೇ ಅಸಾದುದ್ದೀನ್ ಒವೈಸಿ ತೃತೀಯ ರಂಗದ ಬಗ್ಗೆ ಹೇಳಿಕೆ ನೀಡಿದ್ದು, ತೆಲಂಗಾಣ ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.
ದೇಶದ ಜನತೆ ಬಿಜೆಪಿಯ ಆಡಳಿತದಿಂದ ಬೇಸತ್ತಿದ್ದಾರೆ. ಕಾಂಗ್ರೆಸ್ ಪರ್ಯಾಯ ಆಯ್ಕೆಯಾಗುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಬಿಜೆಪಿಯನ್ನು ಎದುರಿಸಲು ತೃತೀಯ ರಂಗ ಅಸ್ತಿತ್ವಕ್ಕೆ ಬರಬೇಕೆಂದು ಒವೈಸಿ ಕರೆ ನೀಡಿದ್ದಾರೆ. 
SCROLL FOR NEXT