ಸಾಂದರ್ಭಿಕ ಚಿತ್ರ 
ದೇಶ

ಎಸ್.ಎಸ್.ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸ್ ಮಾಡಲು ಆಯೋಗ ಅಸ್ತು

ಸಿಬ್ಬಂದಿ ಆಯ್ಕೆ ಆಯೋಗ (ಎಸ್ .ಎಸ್ . ಸಿ) ತಾನು ಫೆ.21ರಂದು ನಡೆಸಿದ್ದ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸ್ ಮಾಡಲು ನಿರ್ಧರಿಸಿದೆ.

ನವದೆಹಲಿ:  ಸಿಬ್ಬಂದಿ ಆಯ್ಕೆ ಆಯೋಗ (ಎಸ್ .ಎಸ್ . ಸಿ) ತಾನು ಫೆ.21ರಂದು ನಡೆಸಿದ್ದ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸ್ ಮಾಡಲು ನಿರ್ಧರಿಸಿದೆ. 
ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ಅಭ್ಯರ್ಥಿಗಳು ಇಂದು ದೆಹಲಿ ಬಿಜೆಪಿ ಸಂಸದರಾದ ಮನೋಜ್ ತಿವಾರಿ ಅವರೊಡನೆ ಎಸ್ .ಎಸ್ . ಸಿ ಅಧ್ಯಕ್ಷ ಅಶೀಮ್ ಖುರಾನಾ ಅವರನ್ನು ಭೇಟಿಯಾಗಿದ್ದಾರೆ. ಆ ವೇಳೆ ಅವರು ಖುರಾನಾ ಅವರಿಗೆ ಮನವಿ ಪತ್ರವೊಂದನ್ನು ಸಲ್ಲಿಸಿದ್ದಾರೆ.  ಅದರಲ್ಲಿ ಅವರು ಫೆ.17ರಿಂದ 22ರವರೆಗೆ ನಡೆದಿದ್ದ ಕಂಬೈನಡ್ ಗ್ರ್ಯಾಜುಯೇಟ್ ಲೆವೆಲ್ (ಟೈರ್ II) ಪರೀಕ್ಷೆಗಳಲ್ಲಿ ಮಡೆದಿದ್ದ ಉತ್ತರ ಪತ್ರಿಕೆ ಸೋರಿಕೆ ಹಗರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ.
"ಪ್ರಕರಣದ ಬಗೆಗೆ ಸಿಬಿಐ ತನಿಖೆ ನಡೆಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಶಿಫಾರಸು ಮಾಡಲು ಆಯೋಗವು ಸಮ್ಮತಿಸಿದೆ" ಎಂದು ಖುರಾನಾ ಹೇಳಿದ್ದಾರೆ.
ಇದಕ್ಕೂ ಮುನ್ನ ಸಂಸದ ತಿವಾರಿ ಪ್ರತಿಭಟನಾ ನಿರತ ಅಭ್ಯರ್ಥಿಗಳೊಡನೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಅಭ್ಯರ್ಥಿಗಳ ಮಹತ್ವಾಕಾಂಕ್ಷೆ, ಅವರಲ್ಲಿನ ತಳಮಳದ ಕುರಿತಂತೆ ತಿಳಿಸಿದ್ದರು.
ಫೆ.27ರಿಂದ ಈಚೆಗೆ ದೆಹಲಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಎಸ್.ಎಸ್.ಸಿ.ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಇದೀಗ ಎಸ್.ಎಸ್.ಸಿ ಪ್ರತಿಭಟನಾಕಾರರ ಮನವಿಯನ್ನು ಪುರಸ್ಕರಿಸಿದೆ. 
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಳ ದರ್ಜೆಯ ಹುದ್ದೆಗಳಿಗಾಗಿ ಎಸ್.ಎಸ್.ಸಿ ಪರೀಕ್ಷೆ ನಡೆಸುತ್ತಿದೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT