ಹೋಳಿ ಸಂಭ್ರಮದ ಬಳಿಕ ದಂಪತಿಗಳ ನಿಗೂಢ ಸಾವು 
ದೇಶ

ಉತ್ತರ ಪ್ರದೇಶ: ಹೋಳಿ ಸಂಭ್ರಮದ ಬಳಿಕ ದಂಪತಿಗಳ ನಿಗೂಢ ಸಾವು

ಹೋಳಿ ಸಂಭ್ರಮ ಮುಗಿಸಿದ್ದ ಕೆಲ ಗಂಟೆಗಳಲ್ಲಿಯೇ ದಂಪತಿಗಳಿಬ್ಬರ ಶವ ಮನೆಯೊಂದರ ಬಾತ್ ರೂಮ್ ನಲ್ಲಿ ಶಂಕಾಸ್ಪದ ರೀತಿಯಲ್ಲಿ ಪತ್ತೆಯಾದ..........

ಘಾಜಿಯಾಬಾದ್(ಉತ್ತರ ಪ್ರದೇಶ): ಹೋಳಿ ಸಂಭ್ರಮ ಮುಗಿಸಿದ್ದ ಕೆಲ ಗಂಟೆಗಳಲ್ಲಿಯೇ ದಂಪತಿಗಳಿಬ್ಬರ ಶವ ಮನೆಯೊಂದರ ಬಾತ್ ರೂಮ್ ನಲ್ಲಿ ಶಂಕಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನ ಇಂದಿರಾಪುರಂನಲ್ಲಿ ನಡೆದಿದೆ.
ಇಂದಿರಾಪುರಂನ ಫ್ಲಾಟ್‌ವೊಂದರಲ್ಲಿ ವಾಸವಾಗಿದ್ದ ಮೊಬೈಲ್‌ ಕಂಪನಿಯ ನೌಕರ ನೀರಜ್ ಸಿಂಘಾನಿಯಾ (38), ಹಾಗೂ ಆತನ ಪತ್ನಿ ರುಚಿ ಸಿಂಘಾನಿಯಾ(35) ಶವಗಳು ಸಂಪೂರ್ಣ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಇವರು ಕಿರಿಯ ಸಹೋದರ ಮತ್ತು ಸಹೋದರಿಯೊಂದಿಗೆ  ಇಂದಿರಾಪುರಂ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. 
ಶುಕ್ರವಾರದಂದು ಹೋಳಿ ಆಚರಣೆ ಸಂಭ್ರಮ ಮುಗಿಸಿದ ದಂಪತಿ ಫ್ಲ್ಯಾಟ್ ಗೆ ಮರಳಿದ್ದಾರೆ. ಹಾಗೆ ಮರಳಿದ ದಂಪತಿ ಸ್ನಾನದ ಕೋಣೆಗೆ ಹೋಗಿದ್ದಾರೆ. ಆದರೆ ಬಹಳ ಸಮಯದವರೆಗೆ ಹೊರಬರಲಿಲ್ಲ. ಆಗ ನೀರಜ್ ತಂದೆ ಪ್ರೇಮ್ ಪ್ರಕಾಶ್ ಬಾಗಿಲು ಬಡಿದು ಕರೆಯಲು ಮುಂದಾದರೂ ದಂಪತಿಗಳಿಂದ ಯಾವ ಪ್ರತಿಕ್ರಿಯೆ ಬಂದಿಲ್ಲ. ಇನ್ನೂ ಕೆಲ ಕಾಲ ಕಾದ ಬಳಿಕ ಪ್ರೇಮ್, ನೀರಜ್ ಸಹೋದರನಿಗೆ ಹೇಳಿದ್ದು ಆತ ಸಹ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಆಗಲೂ ಒಳಗಿನಿಂಡ ಯಾವ ಸದ್ದೂ ಬಾರದ ಹಿನ್ನೆಲೆಯಲ್ಲಿ ವೆಂಟಿಲೇಟರ್ ಮೂಲಕ ನೋಡುವ ಪ್ರಯತ್ನ ನಡೆಸಿದ್ದಾರೆ. ಆಗ ದಂಪತಿಗಳಿಬ್ಬರೂ ಬಾತ್ ರೂಮ್ ನಲ್ಲಿಯೇ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ತಿಳಿದಿದೆ. ತಕ್ಷಣ ಬಾಗಿಲು ಮುರಿದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಆಸ್ಪತ್ರೆ ವೈದ್ಯರು ದಂಪತಿಗಳನ್ನು ಪರೀಕ್ಷಿಸಿ ಇವರಾಗಲೇ ಮೃತಪಟ್ಟಿದ್ದಾರೆ  ಎಂದು ಘೋಷಿಸಿದ್ದಾರೆ.
ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯ ದೇಹದ ಸಮೀಪ ಬಿಪಿ ಮಾತ್ರೆಯ ಡಬ್ಬಿ ದೊರಕಿದ್ದು ಅವರ ಸಾವಿಗೆ ಕಾರಣ ತನಿಖೆಯಿಂದಷ್ಟೇ ತಿಳಿಯಬೇಕಿದೆ ಎಂದು ಜಿಲ್ಲೆಯ ಪೊಲೀಸ್ ಮುಖ್ಯಸ್ಥ ಎಚ್.ಎನ್ ಸಿಂಗ್ ತಿಳಿಸಿದ್ದಾರೆ.. ’
ಹೋಳಿ ಆಚರಣೆಗಾಗಿ ರುಚಿ ಪೋಷಕರು ಸಹ  ನೀರಜ್‌ ಮನೆಗೆ ಆಗಮಿಸಿದ್ದರು. ಇದೀಗ ದಂಪತಿಗಳ ಪಾರ್ಥಿವ ಶರೀರವನ್ನು ಫಾರೆನ್ಸಿಕ್‌ ಇಲಾಖೆಗೆ ಒಪ್ಪಿಸಲಾಗಿದೆ.ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT