ಅಮಿತ್ ಶಾ 
ದೇಶ

ಬಿಜೆಪಿಯ ಸುವರ್ಣ ಯುಗ ಇನ್ನೂ ಆರಂಭವಾಗಿಲ್ಲ: ಅಮಿತ್ ಶಾ

ಬಿಜೆಪಿಯ ಸುವರ್ಣ ಯುಗ ಇನ್ನೂ ಬಂದಿಲ್ಲ. ಬರಬೇಕಾಗಿದೆ. ಕೇವಲ ಈಶಾನ್ಯ ರಾಜ್ಯಗಳ ಗೆಲುವಿನಿಂದ ....

ನವದೆಹಲಿ: ಬಿಜೆಪಿಯ ಸುವರ್ಣ ಯುಗ ಇನ್ನೂ ಬಂದಿಲ್ಲ. ಬರಬೇಕಾಗಿದೆ. ಕೇವಲ ಈಶಾನ್ಯ ರಾಜ್ಯಗಳ ಗೆಲುವಿನಿಂದ ಸಂತೃಪ್ತರಾಗಬೇಡಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸೋಮವಾರ ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.
ಪಶ್ಚಿಮ ಬಂಗಾಳ, ಕೇರಳ, ಒಡಿಶಾ ಮತ್ತು ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರವೇ ಬಿಜೆಪಿಯ ಸುವರ್ಣ ಯುಗ ಆರಂಭವಾಗಲಿದೆ. ಹೀಗಾಗಿ ಪ್ರತಿ ಮತಗಟ್ಟೆಯಲ್ಲೂ ನಮ್ಮ ಕಾರ್ಯಕರ್ತರನ್ನು ಮತ್ತು ಪ್ರತಿ ಪಂಚಾಯ್ತಿಯಲ್ಲೂ ನಮ್ಮ ಪಕ್ಷ ಪ್ರತಿನಿಧಿಯನ್ನು ಸ್ಥಾಪಿಸುವ ಗುರಿ ಹೊಂದಿ ಎಂದು ನಾಯಕರಿಗೆ ಅಮಿತ್ ಶಾ ಸೂಚಿಸಿದ್ದಾರೆ.
ಕೆಲವು ಕಾರ್ಯಕರ್ತರು ಬಿಜೆಪಿಯ ಸುವರ್ಣ ಯುಗ ಆರಂಭವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನಾನು ಸ್ಪಷ್ಟಪಡಿಸುತ್ತಿದ್ದೇನೆ, ಬಿಜೆಪಿಯ ಸುವರ್ಣ ಯುಗ ಇನ್ನೂ ಆರಂಭವಾಗಿಲ್ಲ. ಏಕೆಂದರೆ ಪಶ್ಚಿಮ ಬಂಗಾಳ, ಕರ್ನಾಟಕ, ಕೇರಳ ಮತ್ತು ಒಡಿಶಾದಲ್ಲಿ ನಾವು ಅಧಿಕಾರದಲ್ಲಿಲ್ಲ ಎಂದು ಅಮಿತ್ ಶಾ ಅವರು ಕೇಂದ್ರ ಸಚಿವ ವಿಜಯ್ ಗೋಯಲ್ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ನಾವು ಅಧಿಕಾರದಲ್ಲಿಲ್ಲದ ಈ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರುವವರೆಗೆ ವಿಶ್ರಾಂತಿ ಪಡೆಯದಂತೆ ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಅಧ್ಯಕ್ಷ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT