ಅಮಿತ್ ಶಾ 
ದೇಶ

ಬಿಜೆಪಿಯ ಸುವರ್ಣ ಯುಗ ಇನ್ನೂ ಆರಂಭವಾಗಿಲ್ಲ: ಅಮಿತ್ ಶಾ

ಬಿಜೆಪಿಯ ಸುವರ್ಣ ಯುಗ ಇನ್ನೂ ಬಂದಿಲ್ಲ. ಬರಬೇಕಾಗಿದೆ. ಕೇವಲ ಈಶಾನ್ಯ ರಾಜ್ಯಗಳ ಗೆಲುವಿನಿಂದ ....

ನವದೆಹಲಿ: ಬಿಜೆಪಿಯ ಸುವರ್ಣ ಯುಗ ಇನ್ನೂ ಬಂದಿಲ್ಲ. ಬರಬೇಕಾಗಿದೆ. ಕೇವಲ ಈಶಾನ್ಯ ರಾಜ್ಯಗಳ ಗೆಲುವಿನಿಂದ ಸಂತೃಪ್ತರಾಗಬೇಡಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸೋಮವಾರ ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.
ಪಶ್ಚಿಮ ಬಂಗಾಳ, ಕೇರಳ, ಒಡಿಶಾ ಮತ್ತು ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರವೇ ಬಿಜೆಪಿಯ ಸುವರ್ಣ ಯುಗ ಆರಂಭವಾಗಲಿದೆ. ಹೀಗಾಗಿ ಪ್ರತಿ ಮತಗಟ್ಟೆಯಲ್ಲೂ ನಮ್ಮ ಕಾರ್ಯಕರ್ತರನ್ನು ಮತ್ತು ಪ್ರತಿ ಪಂಚಾಯ್ತಿಯಲ್ಲೂ ನಮ್ಮ ಪಕ್ಷ ಪ್ರತಿನಿಧಿಯನ್ನು ಸ್ಥಾಪಿಸುವ ಗುರಿ ಹೊಂದಿ ಎಂದು ನಾಯಕರಿಗೆ ಅಮಿತ್ ಶಾ ಸೂಚಿಸಿದ್ದಾರೆ.
ಕೆಲವು ಕಾರ್ಯಕರ್ತರು ಬಿಜೆಪಿಯ ಸುವರ್ಣ ಯುಗ ಆರಂಭವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನಾನು ಸ್ಪಷ್ಟಪಡಿಸುತ್ತಿದ್ದೇನೆ, ಬಿಜೆಪಿಯ ಸುವರ್ಣ ಯುಗ ಇನ್ನೂ ಆರಂಭವಾಗಿಲ್ಲ. ಏಕೆಂದರೆ ಪಶ್ಚಿಮ ಬಂಗಾಳ, ಕರ್ನಾಟಕ, ಕೇರಳ ಮತ್ತು ಒಡಿಶಾದಲ್ಲಿ ನಾವು ಅಧಿಕಾರದಲ್ಲಿಲ್ಲ ಎಂದು ಅಮಿತ್ ಶಾ ಅವರು ಕೇಂದ್ರ ಸಚಿವ ವಿಜಯ್ ಗೋಯಲ್ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ನಾವು ಅಧಿಕಾರದಲ್ಲಿಲ್ಲದ ಈ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರುವವರೆಗೆ ವಿಶ್ರಾಂತಿ ಪಡೆಯದಂತೆ ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಅಧ್ಯಕ್ಷ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT