ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಭಾನುವಾರ ಹೇಳಿದ್ದಾರೆ.
ನನ್ನ ವಿರುದ್ಧದ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಮತ್ತು ರಾಜಕೀಯ ಪ್ರೇರಿತ ಮುಂಬೈಯಿಂದ ದೆಹಲಿ ವಾಪಸ್ ಆದ ಬಳಿಕ ಕಾರ್ತಿ ಚಿದಂಬರಂ ಹೇಳಿದ್ದಾರೆ.
ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ ಕಾರ್ಚಿ ಚಿದಂಬರಂ ಅವರನ್ನು ಮುಂಬೈ ಗೆ ಕರೆದೊಯ್ದ, ಐಎನ್ಎಕ್ಸ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಹಾಗೂ ಇಂದ್ರಾಣಿ ಮುಖರ್ಜಿ ಇಬ್ಬರನ್ನೂ ಒಟ್ಟಿಗೆ ವಿಚಾರಣೆ ನಡೆಸಿದ್ದಾರೆ.
ಕಾರ್ತಿ ಚಿದಂಬರಂ ಶಾಮೀಲಾಗಿದ್ದಾರೆ ಎನ್ನಲಾಗಿರುವ ಡೀಲ್ ಬಗ್ಗೆ ವಿಚಾರಣೆ ವೇಳೆ ಇಂದ್ರಾಣಿ ಮುಖರ್ಜಿ ಹಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ ಎಂದು ಹೇಳಲಾಗಿದೆ.
ಕಾರ್ತಿ ಚಿದಂಬರಂ ಐಎನ್ಎಕ್ಸ್ ಮೀಡಿಯಾದಿಂದ ಎಫ್ಐಪಿ ಬಿ ಕ್ಲಿಯರೆನ್ಸ್ ಗಾಗಿ 3.5 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಇಂದ್ರಾಣಿ ಮುಖರ್ಜಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಒಟ್ಟಿಗೆ ವಿಚಾರಣೆಗೊಳಪಡಿಸಲಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos