ಭದ್ರತಾ ಸಿಬ್ಬಂದಿ 
ದೇಶ

ಶೋಪಿಯಾನ್ ನಲ್ಲಿ ಇಬ್ಬರು ಉಗ್ರರು, ನಾಲ್ವರು ನಾಗರಿಕರ ಹತ್ಯೆಯ ನಂತರ ಕಾಶ್ಮೀರ ಉದ್ವಿಗ್ನ

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ....

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹಾಗೂ ನಾಲ್ವರು ನಾಗರಿಕರು ಮೃತಪಟ್ಟಿದ್ದು, ನಾಗರಿಕರ ಹತ್ಯೆಯನ್ನು ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಿದ್ದು, ಕಣಿವೆ ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಹತ್ಯೆಯಾದ ಲಷ್ಕರ್ ಇ ತೊಯ್ಬಾ ಉಗ್ರ ಆಶಿಕ್ ಹುಸೇನ್ ಭಟ್ ಮತ್ತು ಎಂಫಿಲ್ ಮಾಡುತ್ತಿದ್ದ ನಾಗರಿಕ ಗೋವ್ಹಾರ್ ಅಹ್ಮದ್ ಅವರ ಮೃತದೇಹವನ್ನು ಇಂದು ಬೆಳಗ್ಗೆ ಶೋಪಿಯಾನ್ ಜಿಲ್ಲೆಯ ಪಹ್ನೂ ಗ್ರಾಮದಲ್ಲಿ ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಇಬ್ಬರು ಉಗ್ರರು ಮತ್ತು ನಾಲ್ವರು ನಾಗರಿಕರನ್ನು ಹತ್ಯೆ ಖಂಡಿಸಿ ಇಂದು ಪ್ರತ್ಯೇಕತಾವಾದಿಗಳ ವಿವಿಧ ಬಣಗಳ ಮುಖಂಡರು ಕಾಶ್ಮೀರ ಕಣಿವೆಯ ವಿವಿಧೆಡೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಶ್ರೀನಗರದ 7 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮತ್ತು ಕಾಶ್ಮೀರ ಕಣಿವೆಯ ಕೆಲವೆಡೆ ಕರ್ಫ್ಯೂ ಜಾರಿ ಮಾಡಿದ್ದು, ಶಾಲೆಗಳನ್ನು ಬಂದ್ ಮಾಡಲಾಗಿತ್ತು ಮತ್ತು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.
ಜಮ್ಮು ಕಾಶ್ಮೀರ ವಿಮೋಚನಾ ರಂಗದ ಮುಖ್ಯಸ್ಥ ಯಾಸಿನ್ ಮಲ್ಲಿಕ್ ಅವರನ್ನು ಪೊಲೀಸರು ಶ್ರೀನಗರದಲ್ಲಿ ಬಂಧಿಸಿದ್ದಾರೆ. ಅನಂತನಾಗ್‌ನಲ್ಲಿ ಘರ್ಷಣೆಗಿಳಿದ ಅನೇಕ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪಹ್ನೂ ಗ್ರಾಮದಲ್ಲಿ ಸೇನೆಯ ರಾಷ್ಟ್ರೀಯ ರೈಫಲ್‌ನ ಯೋಧರು ತಮ್ಮ ಸಂಚಾರಿ ತಪಾಸಣಾ ವಾಹನದ ಮೇಲೆ ಉಗ್ರಗಾಮಿಗಳು ಗುಂಡು ಹಾರಿಸಿದ್ದಕ್ಕೆ ಪ್ರತಿಯಾಗಿ ಗುಂಡು ಹಾರಿಸಿದಾಗ ಒಬ್ಬ ಉಗ್ರಗಾಮಿ ಮತ್ತು ಇತರ ಮೂವರು ಸತ್ತಿದ್ದರು. ಈ ಮೂವರು ಉಗ್ರಗಾಮಿ ಸಂಘಟನೆಯ ಬಾಹ್ಯ ಕಾರ್ಯಕರ್ತರು ಎಂದು ಸೇನೆ ಹೇಳಿದೆ. ಆದರೆ ಈ ಮೂವರು ನಾಗರಿಕರು ಎಂಬುದು ಜನರ ಮತ್ತು ಪ್ರತ್ಯೇಕತಾವಾದಿಗಳ ವಾದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT