ಮಾಣಿಕ್ ಸರ್ಕಾರ್ 
ದೇಶ

ಹಣ ಬಲ, ಮಾಧ್ಯಮಗಳ ಅಪಪ್ರಚಾರ ಎಡಪಕ್ಷ ಸೋಲಿಗೆ ಕಾರಣ: ಮಾಣಿಕ್ ಸರ್ಕಾರ್

ಊಹಿಸಲಾಗದಷ್ಟು ಹಣ ಬಲ ಮತ್ತು ಮಾಧ್ಯಮಗಳ ನಿರಂತರ ಅಪಪ್ರಚಾರವೇ ಸಿಪಿಐಎಂ ನೇತೃತ್ವದ ಎಡಪಕ್ಷ...

ಅಗರ್ತಾಲ: ಊಹಿಸಲಾಗದಷ್ಟು ಹಣ ಬಲ ಮತ್ತು ಮಾಧ್ಯಮಗಳ ನಿರಂತರ ಅಪಪ್ರಚಾರವೇ ಸಿಪಿಐಎಂ ನೇತೃತ್ವದ ಎಡಪಕ್ಷ ಸೋಲಿಗೆ ಕಾರಣ ಎಂದು ತ್ರಿಪುರದ ನಿರ್ಗಮಿತ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರು ಸೋಮವಾರ ಆರೋಪಿಸಿದ್ದಾರೆ.
ವಿಧಾನಸಭೆ ಚುವಾವಣೆ ಫಲಿತಾಂಶ ಅನಿರೀಕ್ಷಿತ ಮತ್ತು ಎಡ ಪಕ್ಷ ಸರ್ಕಾರ ಕೆಳಗಿಳಿಸಲು ಬಿಜೆಪಿ ಯಾವ ರೀತಿ ಹಣ ಮತ್ತು ಕೇಂದ್ರದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಸರ್ಕಾರ್ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಎಂಜಿಎನ್ ಆರ್ ಇಜಿಎ ಮತ್ತು ವಸತಿ ಯೋಜನೆಗಳಿಗೆ ಹಣ ಹಂಚಿಕೆಯನ್ನು ಕಡಿಮೆ ಮಾಡುವ ಮೂಲಕ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ದಿಗ್ಬಂಧ ವಿಧಿಸಿತ್ತು ಎಂದು ಮಾಣಿಕ್ ಸರ್ಕಾರ್ ಆರೋಪಿಸಿದ್ದಾರೆ.
ಸಿಪಿಐ-ಎಂ ಲಭ್ಯವಿರುವ ಎಲ್ಲಾ ಮಾಹಿತಿಯನ್ನು ಪಡೆದು ಚುನಾವಣೆ ಸೋಲಿಗೆ ಕಾರಣ ಏನು ಎಂಬುದರ ಬಗ್ಗೆ ಅವಲೋಕನ ಮಾಡಲಾಗುವುದು ಎಂದು ಬಡ ನಿರ್ಗಮಿತ ಮುಖ್ಯಮಂತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT