ಸಾಂದರ್ಭಿಕ ಚಿತ್ರ 
ದೇಶ

ಪಿಎನ್ಬಿ ವಂಚನೆ: ಸಂಜೆಯ ನಂತರ ಬಂಧನ ವಿರೋಧಿಸಿ ಬಾಂಬೆ ಹೈಕೋರ್ಟ್ ಗೆ ಮಹಿಳಾ ಸಿಬ್ಬಂದಿ ಮೊರೆ

ವಜ್ರದ ವ್ಯಾಪಾರಿ ನೀರವ್ ಮೋದಿಯ ಬಹುಕೋತಿ ರೂ. ವಂಚನೆ ಪ್ರಕರಣ ಸಂಬಂಧ ಸಿಬಿಐ, ಕಾನೂನು ಉಲ್ಲಂಗನೆ ಮಾಡಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮುಂಬೈ: ವಜ್ರದ ವ್ಯಾಪಾರಿ ನೀರವ್ ಮೋದಿಯ ಬಹುಕೋಟಿ ರೂ. ವಂಚನೆ ಪ್ರಕರಣ ಸಂಬಂಧ ಸಿಬಿಐ, ಕಾನೂನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ನೀರವ್ ಮೋದಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ಕವಿತಾ ಮಾಂಕಿಕರ್ ಹೈಕೋರ್ಟ್ ಮೊರೆ ಹೊಗಿದ್ದು ಸಿಬಿಐ ಅಧಿಕಾರಿಗಳು ಫೆ.20ರ ರಾತ್ರಿ ಎಂಟಕ್ಕೆ ನನ್ನನ್ನು ಬಂಧಿಸಿದ್ದಾರೆ. ಕಾನೂನು ಪ್ರಕಾರವಾಗಿ ಸೂರ್ಯಾಸ್ತವಾದ ಬಳಿಕ ಮಹಿಳಯನ್ನು ಹೀಗೆ ಬಂಧಿಸುವಂತಿಲ್ಲ ಎಂದು ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದಾರೆ.
ಮಾಂಕಿಕರ್, ನೀರವ್ ಮೋದಿ ಅವರ ಸಹಾಯಕ ಕಾರ್ಯನಿರ್ವಾಹಕಿಯಾಗಿದ್ದು ಡೈಮಂಡ್ ಆರ್.ಯು.ಎಸ್., ಸ್ಟೆಲ್ಲರ್ ಡೈಮಂಡ್, ಸೋಲಾರ್ ಎಕ್ಸ್ಪೋರ್ಟ್ ಈ ಮೂರು ಸಂಸ್ಥೆಗಳ ನಿರ್ವಹಣೆಗಾಗಿ ಸಹಿ ಹಾಕಿದ್ದರು.
ನೀರವ್ ಮೋದಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಫೈವ್ ಸ್ಟಾರ್ ಡೈಮಂಡ್ ಅಧ್ಯಕ್ಷ ವಿಪುಲ್ ಅಂಬಾನಿ ಸೇರಿ ಇತರೆ ಐವರು ಆರೋಪಿಗಳನ್ನು ಬಂಧಿಸಿದ್ದ ಸಿಬಿಐ ಅಧಿಕಾರಿಗಳು ಅದೇ ವೇಳೆ ಮಾಂಕಿಕರ್ ಅವರನ್ನೂ ಬಂಧಿಸಿ ವಶಕ್ಕೆ ಪಡೆದಿದ್ದರು. ಅಂದಿನಿಂದ ಇಂದಿನವರೆಗೆ ಮಾಂಕಿಕರ್ ಸಿಬಿಐ ವಶದಲ್ಲಿದ್ದಾರೆ.
ಮಾಂಕಿಕರ್ ಅವರ ಪರ ವಕೀಲರಾದ ವಿಜಯ್ ಅಗರ್ವಾಲ್ ಹೇಳುವಂತೆ ಮಾಂಕಿಕರ್ ಅವರ ಬಂಧನ ಕಾನೂನುಬಾಹಿರವಾಗಿದೆ, ಇದು ಅಸಾಂವಿಧಾನಿಕವಾಗಿದ್ದು ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಅವರು ಹೈಕೋರ್ಟ್ ಗೆ ಮೊರೆ ಇಟ್ಟಿದ್ದಾರೆ.
ನ್ಯಾಯಮೂರ್ತಿ ಎಸ್.ಡಬ್ಲ್ಯು. ಸಂಬ್ರೆ ಅವರಿದ್ದ ಏಕಸದಸ್ಯ ಪೀಠದಲ್ಲಿ ಈ ಅರ್ಜಿ ವಿಚಾರಣೆಗೆ ಬರಲಿದೆ. ಮಾ.12ರಂದು ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ ಎಂದು ಅಗರ್ವಾಲ್ ಹೇಳಿದ್ದಾರೆ.
ಮಾಂಕಿಕರ್ ಅವರು ತಿಳುವಳಿಕೆ ಪತ್ರ(ಎಲ್.ಒಯು) ಗಳಿಗೆ ಮೋಸದ ಸಹಿಗಳನ್ನು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT