ಸಾಂದರ್ಭಿಕ ಚಿತ್ರ 
ದೇಶ

ಪಿಎನ್ಬಿ ವಂಚನೆ: ಸಂಜೆಯ ನಂತರ ಬಂಧನ ವಿರೋಧಿಸಿ ಬಾಂಬೆ ಹೈಕೋರ್ಟ್ ಗೆ ಮಹಿಳಾ ಸಿಬ್ಬಂದಿ ಮೊರೆ

ವಜ್ರದ ವ್ಯಾಪಾರಿ ನೀರವ್ ಮೋದಿಯ ಬಹುಕೋತಿ ರೂ. ವಂಚನೆ ಪ್ರಕರಣ ಸಂಬಂಧ ಸಿಬಿಐ, ಕಾನೂನು ಉಲ್ಲಂಗನೆ ಮಾಡಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮುಂಬೈ: ವಜ್ರದ ವ್ಯಾಪಾರಿ ನೀರವ್ ಮೋದಿಯ ಬಹುಕೋಟಿ ರೂ. ವಂಚನೆ ಪ್ರಕರಣ ಸಂಬಂಧ ಸಿಬಿಐ, ಕಾನೂನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ನೀರವ್ ಮೋದಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ಕವಿತಾ ಮಾಂಕಿಕರ್ ಹೈಕೋರ್ಟ್ ಮೊರೆ ಹೊಗಿದ್ದು ಸಿಬಿಐ ಅಧಿಕಾರಿಗಳು ಫೆ.20ರ ರಾತ್ರಿ ಎಂಟಕ್ಕೆ ನನ್ನನ್ನು ಬಂಧಿಸಿದ್ದಾರೆ. ಕಾನೂನು ಪ್ರಕಾರವಾಗಿ ಸೂರ್ಯಾಸ್ತವಾದ ಬಳಿಕ ಮಹಿಳಯನ್ನು ಹೀಗೆ ಬಂಧಿಸುವಂತಿಲ್ಲ ಎಂದು ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದಾರೆ.
ಮಾಂಕಿಕರ್, ನೀರವ್ ಮೋದಿ ಅವರ ಸಹಾಯಕ ಕಾರ್ಯನಿರ್ವಾಹಕಿಯಾಗಿದ್ದು ಡೈಮಂಡ್ ಆರ್.ಯು.ಎಸ್., ಸ್ಟೆಲ್ಲರ್ ಡೈಮಂಡ್, ಸೋಲಾರ್ ಎಕ್ಸ್ಪೋರ್ಟ್ ಈ ಮೂರು ಸಂಸ್ಥೆಗಳ ನಿರ್ವಹಣೆಗಾಗಿ ಸಹಿ ಹಾಕಿದ್ದರು.
ನೀರವ್ ಮೋದಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಫೈವ್ ಸ್ಟಾರ್ ಡೈಮಂಡ್ ಅಧ್ಯಕ್ಷ ವಿಪುಲ್ ಅಂಬಾನಿ ಸೇರಿ ಇತರೆ ಐವರು ಆರೋಪಿಗಳನ್ನು ಬಂಧಿಸಿದ್ದ ಸಿಬಿಐ ಅಧಿಕಾರಿಗಳು ಅದೇ ವೇಳೆ ಮಾಂಕಿಕರ್ ಅವರನ್ನೂ ಬಂಧಿಸಿ ವಶಕ್ಕೆ ಪಡೆದಿದ್ದರು. ಅಂದಿನಿಂದ ಇಂದಿನವರೆಗೆ ಮಾಂಕಿಕರ್ ಸಿಬಿಐ ವಶದಲ್ಲಿದ್ದಾರೆ.
ಮಾಂಕಿಕರ್ ಅವರ ಪರ ವಕೀಲರಾದ ವಿಜಯ್ ಅಗರ್ವಾಲ್ ಹೇಳುವಂತೆ ಮಾಂಕಿಕರ್ ಅವರ ಬಂಧನ ಕಾನೂನುಬಾಹಿರವಾಗಿದೆ, ಇದು ಅಸಾಂವಿಧಾನಿಕವಾಗಿದ್ದು ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಅವರು ಹೈಕೋರ್ಟ್ ಗೆ ಮೊರೆ ಇಟ್ಟಿದ್ದಾರೆ.
ನ್ಯಾಯಮೂರ್ತಿ ಎಸ್.ಡಬ್ಲ್ಯು. ಸಂಬ್ರೆ ಅವರಿದ್ದ ಏಕಸದಸ್ಯ ಪೀಠದಲ್ಲಿ ಈ ಅರ್ಜಿ ವಿಚಾರಣೆಗೆ ಬರಲಿದೆ. ಮಾ.12ರಂದು ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ ಎಂದು ಅಗರ್ವಾಲ್ ಹೇಳಿದ್ದಾರೆ.
ಮಾಂಕಿಕರ್ ಅವರು ತಿಳುವಳಿಕೆ ಪತ್ರ(ಎಲ್.ಒಯು) ಗಳಿಗೆ ಮೋಸದ ಸಹಿಗಳನ್ನು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT