ಸಂಗ್ರಹ ಚಿತ್ರ 
ದೇಶ

ಶೋಪಿಯಾನ್‌ ಉಗ್ರ ನಿಗ್ರಹ ಕಾರ್ಯಾಚರಣೆ: ಇಬ್ಬರು ಉಗ್ರರು ಸೇರಿ ಒಟ್ಟು ಆರು ಮಂದಿ ಸಾವು!

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ಶೋಪಿಯಾನ್‌ ಜಿಲ್ಲೆಯ ಕುಗ್ರಾಮವೊಂದರಲ್ಲಿ ನಿನ್ನೆ ರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಇದೀಗ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದಿದ್ದ ಗುಂಡಿನ ಕಾಳಗದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ ಆರಕ್ಕೆ ಏರಿದೆ. ಘಟನಾ ಸ್ಥಳದಲ್ಲಿ ಇಂದು ಇನ್ನೂ ಒಂದು ಶವ ಪತ್ತೆಯಾಗಿದ್ದು, ಹತರಾದವರಲ್ಲಿ ಇಬ್ಬರು ಎಲ್‌ ಇ ಟಿ ಉಗ್ರರು ಮತ್ತು ಇತರರು ನಾಲ್ವರು ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಇನ್ನು ಗುಂಡೇಟಿನಿಂದ ಸಾವಿಗೀಡಾಗಿದ್ದ ಉಗ್ರ ಗುರುತು ಪತ್ತೆಯಾಗಿದ್ದು, ಈತ ಲಷ್ಕರ್‌ ಇ ತೊಯ್ಬಾ ಸಂಘಟನೆಯ ಉಗ್ರ ಆಶಿಕ್‌ ಹಸೇನ್‌ ಭಟ್‌ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ ಸೇನೆಯ 44ನೇ ರಾಷ್ಟ್ರೀಯ ರೈಫ‌ಲ್‌ ಪಡೆ ಮತ್ತು ಉಗ್ರರ ನಡುವೆ ಪಹನೂ ಪ್ರದೇಶದಿಂದ ಸುಮಾರು ಹತ್ತು ಕಿ.ಮೀ. ದೂರದ ಸೈದಾಪೋರಾದಲ್ಲಿನ ಆ್ಯಪಲ್‌ ತೋಟವೊಂದರಲ್ಲಿ ಭಾನುವಾರ ರಾತ್ರಿ  ಗುಂಡಿನ ದಾಳಿ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 
ಇಂದು ಪತ್ತೆಯಾದ ಹತ ಉಗ್ರನನ್ನು ಶೋಪಿಯಾನ್‌ನ ಜಾಮ್‌ನಗರೀ ಗ್ರಾಮದ ನಿವಾಸಿಯಾಗಿರುವ ಶಾಹೀದ್‌ ಅಹ್ಮದ್‌ ದಾರ್‌ ಎಂದು ಗುರುತಿಸಲಾಗಿದೆ. ಸೇನೆಯ ಗುಂಡಿಗೆ ಬಲಿಯಾದ ಪೌರರನ್ನು ಇನ್ನಷ್ಟೇ ಗುರುತಿಸಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT